Missing | ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ

0 35


ಶಿವಮೊಗ್ಗ: ಹಾವೇರಿ ಜಿಲ್ಲೆ, ಹಾನಗಲ್ ತಾಲೂಕು, ಹನುಮಪುರ ವಾಸಿ ಶ್ರೀಕಾಂತ್ ಎಂಬುವವರ ಪತ್ನಿ 20 ವರ್ಷದ ತೇಜಸ್ವಿನಿ ಅಲಿಯಾಸ್ ರೂಪ ಎಂಬ ಮಹಿಳೆ ಏ.24 ರಂದು ಶಿವಮೊಗ್ಗದ ಬಸ್ ನಿಲ್ದಾಣದ ಎದುರು ಅಶೋಕ ಲಾಡ್ಜ್‍ನಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5.3 ಅಡಿ ಎತ್ತರ, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಹಳದಿ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ.


ದಾವಣಗೆರೆ ಜಿಲ್ಲೆ ವಿನೋಬನಗರ 8ನೇ ಮುಖ್ಯ ರಸ್ತೆ, ದೇವರಾಜ ಅರಸ್ ಲೇಔಟ್ ವಾಸಿ ಜೆ. ಕಾರ್ತಿಕ್ ಶ್ರೀನಿವಾಸ್ ಎಂಬುವವರ ತಂದೆ 65 ವರ್ಷದ ಟಿ.ಜಯಣ್ಣ ಬಿನ್ ತಿಪ್ಪೇಸ್ವಾಮಿ ಎಂಬುವವರು ಮೇ-21 ರಂದು ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದಿಂದ ಕಾಣೆಯಾಗಿರುತ್ತಾರೆ. ಈ ವ್ಯಕ್ತಿಯು 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ತುಟಿಯ ಹತ್ತಿರ ಕಪ್ಪು ಮಚ್ಚೆ ಇರುತ್ತದೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಬಿಳಿ ಚೆಕ್ಸ್ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮತ್ ಲೇಔಟ್ 1ನೇ ಕ್ರಾಸ್, ಇಟ್ಟಿಗೆ ಕಾರ್ಖಾನೆ ಹತ್ತಿರ ವಾಸಿ ಹರ್ಷದ್ ಖಾನ್ ಬಿನ್ ಸರದಾರ್ ಪಾಷ ಎಂಬ 28 ವರ್ಷದ ವ್ಯಕ್ತಿ ಕಾಣೆಯಾಗಿದ್ದು, ಈತನ ಚಹರೆ 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಗುಂಡುಮುಖ, ತೆಳುವಾದ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಎಡಗಣ್ಣು ಸಣ್ಣ ಹಾಗೂ ಎಡ ಕಾಲು ಕುಂಟುತ್ತಾರೆ. ಉರ್ದು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಈತ ಕಪ್ಪು ಕಲತ್ ಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.


ಈ ವ್ಯಕ್ತಿಗಳ ಮಾಹಿತಿ ಸಿಕ್ಕಿದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9611761255 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!