Categories: Shivamogga

Missing | ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ


ಶಿವಮೊಗ್ಗ: ಹಾವೇರಿ ಜಿಲ್ಲೆ, ಹಾನಗಲ್ ತಾಲೂಕು, ಹನುಮಪುರ ವಾಸಿ ಶ್ರೀಕಾಂತ್ ಎಂಬುವವರ ಪತ್ನಿ 20 ವರ್ಷದ ತೇಜಸ್ವಿನಿ ಅಲಿಯಾಸ್ ರೂಪ ಎಂಬ ಮಹಿಳೆ ಏ.24 ರಂದು ಶಿವಮೊಗ್ಗದ ಬಸ್ ನಿಲ್ದಾಣದ ಎದುರು ಅಶೋಕ ಲಾಡ್ಜ್‍ನಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5.3 ಅಡಿ ಎತ್ತರ, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಹಳದಿ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ.


ದಾವಣಗೆರೆ ಜಿಲ್ಲೆ ವಿನೋಬನಗರ 8ನೇ ಮುಖ್ಯ ರಸ್ತೆ, ದೇವರಾಜ ಅರಸ್ ಲೇಔಟ್ ವಾಸಿ ಜೆ. ಕಾರ್ತಿಕ್ ಶ್ರೀನಿವಾಸ್ ಎಂಬುವವರ ತಂದೆ 65 ವರ್ಷದ ಟಿ.ಜಯಣ್ಣ ಬಿನ್ ತಿಪ್ಪೇಸ್ವಾಮಿ ಎಂಬುವವರು ಮೇ-21 ರಂದು ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದಿಂದ ಕಾಣೆಯಾಗಿರುತ್ತಾರೆ. ಈ ವ್ಯಕ್ತಿಯು 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ತುಟಿಯ ಹತ್ತಿರ ಕಪ್ಪು ಮಚ್ಚೆ ಇರುತ್ತದೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಬಿಳಿ ಚೆಕ್ಸ್ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮತ್ ಲೇಔಟ್ 1ನೇ ಕ್ರಾಸ್, ಇಟ್ಟಿಗೆ ಕಾರ್ಖಾನೆ ಹತ್ತಿರ ವಾಸಿ ಹರ್ಷದ್ ಖಾನ್ ಬಿನ್ ಸರದಾರ್ ಪಾಷ ಎಂಬ 28 ವರ್ಷದ ವ್ಯಕ್ತಿ ಕಾಣೆಯಾಗಿದ್ದು, ಈತನ ಚಹರೆ 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಗುಂಡುಮುಖ, ತೆಳುವಾದ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಎಡಗಣ್ಣು ಸಣ್ಣ ಹಾಗೂ ಎಡ ಕಾಲು ಕುಂಟುತ್ತಾರೆ. ಉರ್ದು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಈತ ಕಪ್ಪು ಕಲತ್ ಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.


ಈ ವ್ಯಕ್ತಿಗಳ ಮಾಹಿತಿ ಸಿಕ್ಕಿದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9611761255 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

2 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

13 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

18 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago