Ripponpet | ಭೀಕರ ಅಪಘಾತ, ಯುವಕ ಸ್ಥಳದಲ್ಲೇ ಸಾವು !
ರಿಪ್ಪನ್ಪೇಟೆ : ಸಾಗರ ರಸ್ತೆಯ ವಡಗೆರೆ ಶಾಲೆಯ ಮುಂಭಾಗದಲ್ಲಿ ಬೈಕ್ (Bike) ಅಪಘಾತವಾಗಿ (Accident) ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ (Death) ಘಟನೆ ನಡೆದಿದೆ.
ಮೃತ ಯುವಕನನ್ನು ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಚಾಲನ ಪರವಾನಗಿ ಆಧಾರದ ಮೇಲೆ ಗುರುತಿಸಲಾಗಿದೆ.
ಆನಂದಪುರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತ್ತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ಗೆ ಕಾರೊಂದು ಹಿಂಬದಿಯಿಂದ ಗುದ್ದಿದೆ ಎಂದು ನೆರೆದಿರುವ ಜನರು ಹೇಳುತ್ತಿದ್ದು ಇನ್ನೂ ಮಾಹಿತಿ ಸ್ಪಷ್ಟವಾಗಿಲ್ಲ. ಅಪಘಾತಕ್ಕೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ರಿಪ್ಪನ್ಪೇಟೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.