ಹೊಸನಗರ: ಸಹಕಾರಿ ಧುರೀಣ ಹಾಗೂ ಇತ್ತೀಚಿಗೆ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾಗಿ ಇವರ ಜನ ಬೆಂಬಲ ಕಂಡು ವಿರೋಧಿಗಳು ಅಸೊಯೆಯಿಂದ ಆರ್.ಎಂ. ಮಂಜುನಾಥ ಗೌಡರವರ 3 ಮನೆಗಳ ಮೇಲೆ ಇಡಿ ದಾಳಿ ನಡೆಸಿದ್ದು ಇವರ ದಾಳಿಯನ್ನು ಕಳೂರು ಸೊಸೈಟಿ ಹಾಗೂ ತುಂಗಾ ಅಡಿಕೆ ಮಂಡಿಯ ಅಧ್ಯಕ್ಷ ದುಮ್ಮ ವಿನಯ್ಕುಮಾರ್ ಖಂಡಿಸಿದ್ದಾರೆ.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಇವರು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾಗುವ ಸಂದರ್ಭದಲ್ಲಿ ಸಾವಿರಾರು ಜನ ಇವರ ಬೆಂಬಲಕ್ಕೆ ನಿಲ್ಲುವುದರ ಜೊತೆಗೆ ಕೆಲವು ತಾಲ್ಲೂಕುಗಳಲ್ಲಿ ಇವರಿಗೆ ಅಭಿನಂದನೆ ಮಹಾಪೂರ ಓದಗಿರುವುದನ್ನು ನೋಡಿ ವಿರೋಧ ಪಕ್ಷದವರಿಗೆ ಹೊಟ್ಟೆ ಉರಿ ತಡೆಯಲಾಗದೇ ಇಡಿ ದಾಳಿ ನಡೆಸಿದ್ದಾರೆ. ಇವರು ಯಾವುದೇ ದಾಳಿಗಳಿಗೂ ಹೆದರುವ ವ್ಯಕ್ತಿಯಲ್ಲ ಅಂಥಹ ಡಿ.ಸಿ.ಸಿ ಬ್ಯಾಂಕ್ ಹಗರಣ ಮಾಡಿದ್ದಾರೆ ಎಂದು ಬಿಂಬಿಸಿದರೂ ತಲೆ ಕೆಡಿಸಿಕೊಳ್ಳದೆ ನ್ಯಾಯಾಲಯದಲ್ಲಿ ಲೋಕಾಯುಕ್ತದಲ್ಲಿ ಜಯಶಾಲಿಯಾಗಿ ಬಂದಿದ್ದಾರೆ 10 ವರ್ಷದ ಹಿಂದಿನ ಕೇಸು ಮುಗಿದು ಹೋದ ಅಧ್ಯಾಯವನ್ನು ಪುನಃ ಪುನಃ ಎತ್ತಿ ಅವರನ್ನು ತೇಜೋವಧೆ ಮಾಡುವುದು ಸರಿಯಲ್ಲ.
ಮಂಜುನಾಥ ಗೌಡರವರ ವರ್ಚಸ್ಸು ಕಡಿಮೆ ಮಾಡಬೇಕೆಂದು ಇಂಥಹ ದಾಳಿ ನಡೆಸುತ್ತಿದ್ದು ಇವರ ಬೆಂಬಲಕ್ಕಾಗಿ ಜನಸಾಗರವೇ ಹಾರಿದು ಬರುತ್ತಿದೆ ಯಾವ ವಿರೋಧಿ ಗುಂಪು ಮಂಜುನಾಥ ಗೌಡರವರಿಗೆ ಜನ ಬೆಂಬಲ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…