ಆಶ್ರಯ ಯೋಜನೆಗೆ ಬಂಗಾರಪ್ಪನವರ ಹೆಸರಿಡಿ ; ಆರ್ಯ ಈಡಿಗ ಸಂಘದಿಂದ ಮನವಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆಶ್ರಯ ಯೋಜನೆಗೆ ದಿ. ಎಸ್. ಬಂಗಾರಪ್ಪ ವಸತಿ ಯೋಜನೆ ಎಂದು ನಾಮಕರಣ ಮಾಡಲು ಆಗ್ರಹಿಸಿ ಜಿಲ್ಲಾ ಆರ್ಯ ಈಡಿಗರ ಸಂಘ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.


ಬಂಗಾರಪ್ಪನವರು ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲಾ ಜನಾಂಗದವರ ಆಶಾಕಿರಣ ಆಗಿದ್ದವರು. ಹಲವು ಯೋಜನೆಗಳನ್ನು ಜಾರಿಗೆ ತಂದವರು. ಅದರಲ್ಲಿ ಆಶ್ರಯ ಯೋಜನೆ ತುಂಬಾ ಜನಪ್ರಿಯವಾಗಿತ್ತು. ಈ ಆಶ್ರಯ ಯೋಜನೆ ಜೊತೆ ಆರಾಧನಾ, ವಿಶ್ವ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್ ಹೀಗೆ ಹಲವು ಯೋಜನೆಗಳನ್ನು ರೂಪಿಸಿದವರು ಎಂದು ಮನವಿದಾರರು ತಿಳಿಸಿದರು.


ಅ.26ಕ್ಕೆ ಅವರಿಗೆ 90 ವರ್ಷ ತುಂಬುತ್ತಿತ್ತು. ಇದರ ಅಂಗವಾಗಿ ಬಂಗಾರಪ್ಪ ಅವರ ಹೆಸರನ್ನು ಆಶ್ರಯ ಯೋಜನೆಗೆ ಅಥವಾ ಆರಾಧನಾ ಯೋಜನೆಗೆ ನಾಮಕರಣ ಮಾಡಿ ಆ ಮೂಲಕ ಕರ್ನಾಟಕದ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.


ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಉದಯಕುಮಾರ್, ಕೆ.ಜಿ. ರಾಮಚಂದ್ರಪ್ಪ, ಪರಶುರಾಮಪ್ಪ, ಕೃಷ್ಣಮೂರ್ತಿ, ಕೃಷ್ಣಪ್ಪ, ರುದ್ರಪ್ಪ ಎ.ಬಿ., ರಘುಪತಿ, ರಾಜಪ್ಪ ಎಂ.ಬಿ. ಮುಂತಾದವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

23 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago