Shivamogga | ಜಿಲ್ಲೆಯ ಎಲ್ಲಾ ಸರ್ಕಾರಿ ಸಿಬ್ಬಂದಿಗಳು ಹಾಗೂ ಶಿಕ್ಷಕರು ಕೇಂದ್ರ ಸ್ಥಾನದಲ್ಲಿರಲು ಸೂಚನೆ

0 41

ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸಲು ಸರ್ಕಾರಿ ಅಧಿಕಾರಿ/ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಸಿಬ್ಬಂಧಿ ಹಾಗೂ ಶಿಕ್ಷಕ ವರ್ಗದವರು ತಮ್ಮ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿಯನ್ನು ಪಡೆಯದೇ ತಮ್ಮ ಕೇಂದ್ರ ಸ್ಥಾನವನ್ನು ಬಿಡದೆ ಇರುವುವಂತೆ ಕ್ರಮಕೈಗೊಳ್ಳಲು ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಡಿಸಿ ಸೂಚಿಸಿದ್ದಾರೆ.

ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳಿಗೆ ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಾಗಿ ಕ್ರಮವಹಿಸುವಂತೆ ನಿರ್ದೇಶಿಸಲು ತಿಳಿಸಿದೆ ಮತ್ತು ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆಯದೇ ತಮ್ಮ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ.

Leave A Reply

Your email address will not be published.

error: Content is protected !!