Categories: Shivamogga

Shivamogga | ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡ ಮಕ್ಕಳ ದಸರಾ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಮ್ಮೂರ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆಗಳ ಬಹುಮಾನ ವಿತರಣೆ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಫ್ರೀಡಂ ಪಾರ್ಕ್‌ನ ವೇದಿಕೆಯಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.


ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಪ್ರತಿಭಾನ್ವಿತ ಮಕ್ಕಳಾದ ಡ್ರಾಮಾ ಜೂನಿಯರ್ ಖ್ಯಾತಿಯ ಕು| ರಿದ್ದಿ  ಎಸ್. ಹಾಗೂ ಸರಿಗಮಪ ಹಿನ್ನೆಲೆ ಗಾಯಕಿ ಕು| ನೇಹಾ ಆರ್. ಉದ್ಘಾಟಿಸಿ ತಮ್ಮ ಕಲೆಯನ್ನು ವೇದಿಕೆಯಲ್ಲಿ ಪ್ರದರ್ಶಿಸುವ ಮೂಲಕ ಪ್ರೇಕ್ಷರನ್ನು ರಂಜಿಸಿದರು.
ಮಕ್ಕಳ ದಸರಾದ ಅಂಗವಾಗಿ ಹಮ್ಮಿಕೊಂಡಿದ್ದ ಹಲವಾರು ಕ್ರೀಡೆ, ಕಲೆ, ಕೌಶಲ್ಯ, ಕರಾಟೆ ಕೂಡೋ ಮಾರ್ಷಲ್ ಆರ್ಟ್ಸ್ ಸೇರಿದಂತೆ ಹಲವು ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆಯ ಹಾಗೂ ಎಸ್‌ಎಸ್‌ಎಲ್‌ಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ಶಿವಮೊಗ್ಗದ ಹತ್ತು ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

20ಕ್ಕೂ ಹೆಚ್ಚು ಶಾಲೆಗಳಿಂದ ಆಗಮಿಸಿದ ಶಾಲಾ ಮಕ್ಕಳು ಸಾಂಸ್ಕೃತಿಕ ಕಲರವ ನೃತ್ಯಗಳನ್ನು ಪ್ರದರ್ಶಿಸಿದರು. ವಿಶೇಷವಾಗಿ ಪ್ರಪ್ರಥಮ ಬಾರಿಗೆ ದಸರಾ ಕಾರ್ಯಕ್ರಮದ ಫ್ರೀಡಂ ಪಾರ್ಕ್‌ನ ವೇದಿಕೆಯ ಮೇಲೆ ಶಿವಮೊಗ್ಗ ನಗರದ ಕರಾಟೆಪಟುಗಳು ಸಾಹಸಮಯ ಕರಾಟೆ ಕಲೆಯನ್ನು ಪ್ರದರ್ಶಿಸಿದರು. ಕೊಡಗು ಜಿಲ್ಲೆಯಿಂದ ಆಗಮಿಸಿದ ಜಾದೂಗಾರ ವಿಕ್ರಂ ಶೆಟ್ಟಿ ಅವರು ತಮ್ಮ ಜಾದೂ ಕಲೆಯಿಂದ ಮಕ್ಕಳನ್ನು ಹಾಗೂ ನಾಗರಿಕರನ್ನು ರಂಜಿಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಎಮ್. ಶಂಕರ್ ಆಗಮಿಸಿ ಶಿವಮೊಗ್ಗ ದಸರಾ ಉತ್ಸವ ನಡೆದು ಬಂದ ಹಾದಿ ಮೆಲುಕು ಹಾಕಿದರು.


ಶಾಸಕ ಎಸ್.ಎನ್. ಚನ್ನಬಸಪ್ಪ ಮಕ್ಕಳ ಸಾಂಸ್ಕೃತಿಕ ಕಲರವವನ್ನು ವೀಕ್ಷಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ದಸರಾ ಸಮಿತಿಯ ಅಧ್ಯಕ್ಷೆ ರೇಖಾ ರಂಗನಾಥ್ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಪಾಲಿಕೆ ಉಪಮೇಯರ್ ಲಕ್ಷ್ಮೀಶಂಕರ್ ನಾಯಕ್, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಸದಸ್ಯರಾದ ಸುನೀತಾ ಅಣ್ಣಪ್ಪ, ಹೆಚ್.ಸಿ. ಯೋಗೇಶ್, ಆರ್.ಸಿ. ನಾಯ್ಕ್, ಮಂಜುಳಾ ಶಿವಣ್ಣ, ಸುವರ್ಣಾ ಶಂಕರ್, ವಿಶ್ವನಾಥ್, ಮಂಜುನಾಥ್, ರಾಜು, ಅನಿತಾ ರವಿಶಂಕರ್, ಆರತಿ ಆ.ಮಾ.ಪ್ರಕಾಶ್, ಸಂಗೀತಾ ನಾಗರಾಜ್ ಹಾಗೂ ಪಾಲಿಕೆಯ ಅಧಿಕಾರಿಗಳು, ನಗರದ ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾ ಹಾಗೂ ಸಾಂಸ್ಕೃತಿಕ ತರಬೇತುದಾರರು, ಪೋಷಕರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago