Shivamogga | ಇನ್ನೂ ಮುದ್ರಣವಾಗದ ದಸರಾ ಆಹ್ವಾನ ಪತ್ರಿಕೆ !

ಶಿವಮೊಗ್ಗ: ನಾಡಹಬ್ಬ ದಸರಾವನ್ನು ಶಿವಮೊಗ್ಗ ನಗರದಲ್ಲಿ ಅತ್ಯಂತ ವೈಭವದಿಂದ, ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಇಡೀ ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆಯನ್ನು ಮೈಸೂರು ಹೊರತುಪಡಿಸಿದರೆ ಅತ್ಯಂತ ವಿಜೃಂಭಣೆಯಿಂದ ನಡೆಸುವುದು ಶಿವಮೊಗ್ಗ ಜಿಲ್ಲೆಯಲ್ಲಿ.


ಮಹಾನಗರ ಪಾಲಿಕೆವತಿಯಿಂದ ದಸರಾ ಹಬ್ಬಕ್ಕೆ ವಿವಿಧ ಸಮಿತಿಗಳನ್ನು ಆಯೋಜನೆ ಮಾಡಲಾಗುತ್ತದೆ ಅದರ ಮೂಲಕ ಸಾರ್ವಜನಿಕರಿಗೆ ಅನೇಕ ಕಾರ್ಯಕ್ರಮಗಳನ್ನು ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಇದರಲ್ಲಿ ಭಾಗವಹಿಸಲೆಂದೇ ಅನೇಕ ಕಲಾವಿದರು, ಕಲಾತಂಡಗಳು ತಯಾರಿಯನ್ನು ನಡೆಸಿಕೊಳ್ಳುತ್ತಾರೆ. ಆದರೆ ಈ ಬಾರಿ ಇವರೆಲ್ಲರಿಗೂ ನಿರಾಸೆಯಾಗಿದೆ.


ಹೌದು, ಪ್ರತಿ ವರ್ಷವೂ ಕೂಡ ದಸರಾ ಆರಂಭವಾಗುವ ಮುನ್ನ ಸಾರ್ವಜನಿಕರಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮಹಿಳಾ ದಸರಾ ಸಮಿತಿ, ಯುವ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ರಂಗ ದಸರಾ ಸಮಿತಿ, ಆಹಾರ ದಸರಾ ಸಮಿತಿ ಸೇರಿದಂತೆ ಯಾವ ಯಾವ ಸಮಿತಿಗೆ ಯಾರು ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ,  ಆ ಸಮಿತಿಯಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಆ ಕಾರ್ಯಕ್ರಮಗಳು ಎಲ್ಲಿ ನಡೆಯಲಿದೆ. ಈ ಎಲ್ಲ ಮಾಹಿತಿಗಳನ್ನು ತಿಳಿಸಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ರೀತಿಯಾದಂತಹ ನಿಖರವಾದ ಮಾಹಿತಿಗಳು ಸಾರ್ವಜನಿಕರಿಗೆ ಲಭ್ಯವಾಗಿಲ್ಲ.


ಇಂದಿನಿಂದ ಕೆಲವು ದಸರಾ ಸಮಿತಿಯಿಂದ ಕಾರ್ಯಕ್ರಮಗಳು, ಸ್ಪರ್ಧೆಗಳು ಆರಂಭವಾಗಿದೆ. ಆದರೆ ಮಾಹಿತಿಯ ಕೊರತೆಯಿಂದ ಭಾಗವಹಿಸಲು ಸಾಧ್ಯವಾಗಿಲ್ಲದೆ ಸಾರ್ವಜನಿಕರ ನಿರಾಸೆ ಒಳಗಾಗಿದ್ದಾರೆ. ಶಿವಮೊಗ್ಗ ನಗರ ಜನತೆಗಾಗಿ ಆಯೋಜನೆ ಮಾಡಿರುವ ದಸರಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲ. ಮತ್ತೊಂದೆಡೆ ಈ ಬಾರಿಯ ದಸರಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯೇ ಇನ್ನೂ ಕೂಡ ಮುದ್ರಣವಾಗಿಲ್ಲ ಎಂಬ ಮಾತುಗಳು ಎಲ್ಲೆಡೆ ಹರಿದಾಡುತ್ತಿದೆ. ಇನ್ನಾದರೂ ಉಳಿದ ದಸರಾ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಡಿ ಎಂಬುದು ಸಾರ್ವಜನಿಕರ ಅಪೇಕ್ಷೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago