Shivamogga | ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ; 144 ಸೆಕ್ಷನ್ ಜಾರಿ
ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಾಂತಿನಗರದ ರಾಗಿಗುಡ್ಡದ ಬಳಿ ನಡೆದಿದೆ.
ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಘರ್ಷಣೆ ಶುರುವಾಗಿದೆ. ಕಿಡಿಗೇಡಿಗಳು ಹತ್ತಿರದ ಮನೆಗಳ ಕಿಟಕಿಗಳು, ವಾಹನಗಳ ಮೇಲೆಲ್ಲ ಕಲ್ಲು ತೂರಿದ್ದಾರೆ. ಅಲ್ಲದೇ ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರು, ಮಾಧ್ಯಮದವರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘರ್ಷಣೆ ಸಂಭವಿಸುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಕಿಡಿಗೇಡಿಗಳನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಆದರೆ ಕಿಡಿಗೇಡಿಗಳು ಪೊಲೀಸರು ಹಾಗೂ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇಬ್ಬರು ಪೊಲೀಸರು, ಮಾಧ್ಯಮದವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
144 ಸೆಕ್ಷನ್ ಜಾರಿ
ಇನ್ನು ಗಲಾಟೆ ಸಂಭವಿಸುತ್ತಿದ್ದಂತೆ ಪೊಲೀಸರು ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಆದರೆ ಅವರ ಮೇಲೂ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಹೀಗಾಗಿ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದೀಗ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.