ಶಿವಮೊಗ್ಗ: ಇಂದು ನಡೆಯಲಿರುವ ಹಿಂದೂ ಮಹಾಸಭಾ ಗಣೇಶನ ರಾಜಬೀದಿ ಉತ್ಸವ ಶಾಂತಿಯುತವಾಗಿ ನೆರವೇರಲು ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ತಿಳಿಸಿದರು.
ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕಿಡಿಗೇಡಿ ಕೃತ್ಯ ನಡೆಸುವ ಶಂಕೆ ಇರುವ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಬಂದೋಬಸ್ತ್ಗಾಗಿ 05 ಮಂದಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. 14 ಡಿವೈಎಸ್ಪಿ, 40 ಇನ್ಸ್ಪೆಕ್ಟರ್, 75 ಪಿಎಸ್ಐ, ಹೆಡ್ ಕಾನ್ಸ್ಟೇಬಲ್ ಮತ್ತು ಹೋಮ್ ಗಾರ್ಡ್ ಸೇರಿ 2500 ಮಂದಿ ಕಾರ್ಯನಿರ್ವಹಿಸಲಿದ್ದಾರೆ. ಇದರ ಜೊತೆಗೆ 02 ಕೆಎಸ್ಆರ್ಪಿ, 02 ಆರ್ಎಎಫ್ ಹಾಗೂ 10 ಡಿಎಆರ್ ತುಕಡಿಗಳನ್ನು ಬಂದೋಬಸ್ತ್ಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. 3000ಕ್ಕೂ ಅಧಿಕ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಗಣಪತಿ ವಿಸರ್ಜನೆಗೆ 400ಕ್ಕೂ ಅಧಿಕ ಸ್ವಯಂ ಸೇವಕರು ಕಾರ್ಯನಿರ್ವಹಿಸಲು ಮುಂದೆ ಬಂದಿದ್ದಾರೆ. ಅವರನ್ನು ಕೂಡ ವಿವಿಧÀ ಸ್ಥಳಗಳಲ್ಲಿ ಬಳಕೆ ಮಾಡಿಕೊಳ್ಳಲಾಗುವುದು. ಭದ್ರಾವತಿಯ 150 ಮಂದಿ ಸ್ವಯಂ ಸೇವಕರು ಇಲಾಖೆಗೆ ಸಹಾಯ ಮಾಡಿದ್ದಾರೆ ಎಂದರು.
ಜಿಲ್ಲೆಯಲ್ಲಿ 1300 ರೌಡಿ ಶೀಟರ್ಗಳು ಇದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ. ಕೆಲವರು ಊರು ತೊರೆದಿದ್ದಾರೆ. ಇದುವರೆಗೂ ಜೈಲಿನಲ್ಲಿದ್ದು ಹೊರಬಂದಿರುವ ಸುಮಾರು 70ರಿಂದ 80 ಮಂದಿಯನ್ನು ಪುನಃ ವಶಕ್ಕೆ ಪಡೆಯಲಾಗಿದೆ ಎಂದರು.
ಮೆರವಣಿಗೆ ಮೇಲೆ ಸಂಪೂರ್ಣ ನಿಗಾ ಇಡಲು ಈಗಾಗಲೇ 500 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದರ ಜೊತೆಗೆ 08 ಡ್ರೋನ್ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. 100 ಕ್ಯಾಮೆರಾ ಕಣ್ಗಾವಲು ಸಹ ಇರಲಿದೆ ಎಂದು ಮಾಹಿತಿ ನೀಡಿದರು.
ಎಎಸ್ಪಿ ಅನಿಲ್ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಸುದ್ದಿಗೋಷ್ಟಿಯಲ್ಲಿ ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…