ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಭಾನುವಾರ ಮಲೆನಾಡಿನ (Malenadu) ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ಶಿವಮೊಗ್ಗ (Shivamogga) ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಕೆ ಪಂಟಿಕೆ (Antige Pantige) ಪದಗಳ ಮೂಲಕ ಶುಭ ಹಾರೈಸಿತು.
ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಿಂದ ಸಂಜೆ ಹೊರಟ ಅಂಟಿಕೆ ಪಂಟಿಕೆಯ ಎರಡು ತಂಡಗಳನ್ನು ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಬರಮಾಡಿಕೊಂಡರು. ನಗರದ ಸುಮಾರು 80 ಕ್ಕು ಹೆಚ್ಚು ಮೆನೆಗಳಿಗೆ ಅಂಟಿಕೆ ಪಂಟಿಕೆ ತಂಡ ಬೆಳಗಿನ ಜಾವದವರೆಗೂ ತೆರಳಿತು.
‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಕೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸುತ್ತಾರೆ. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.
ಕಾರ್ಯಕ್ರಮವನ್ನು ಪೊಲೀಸ್ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉದ್ಘಾಟಿಸಿ ತಂಡದೊಂದಿಗೆ ಹೆಜ್ಜೆ ಹಾಕಿದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ, ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಭೈರಾಪುರ ಶಿವಪ್ಪಮೇಷ್ಟು, ದೇವರಾಜ್, ಬಿ.ಟಿ.ಅಂಬಿಕಾ, ಮಹಾದೇವಿ, ಪಿ.ಕೆ.ಸತೀಶ್, ಶ್ರೀನಿವಾಸ ನಗಲಾಪುರ, ಸುಶೀಲ ಷಣ್ಮುಗಂ, ಸಿ.ಎಂ.ನೃಪತುಂಗ, ಲಲಿತಮ್ಮ, ಲೀಲಾವತಿ, ವಾಸಪ್ಪಗೌಡ, ಯೋಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…