Categories: Shivamogga

Shivamogga | ದುಷ್ಕೃತ್ಯ ಮಾಡುವ ಯಾರೇ ವ್ಯಕ್ತಿಗಳಾಗಲಿ ಧರ್ಮದವರಾಗಿರಲಿ ಅವರನ್ನು ಎಚ್ಚರಿಸುವ ಕೆಲಸ ಸರ್ಕಾರ ಮಾಡಬೇಕು ; BYR

ಶಿವಮೊಗ್ಗ : ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ಖಂಡಿಸಿರುವ ಸಂಸದ ಬಿ ವೈ ರಾಘವೇಂದ್ರ, ರೀತಿಯ ದುಷ್ಕೃತ್ಯ ಮಾಡುವ ಯಾರೇ ವ್ಯಕ್ತಿಗಳಾಗಲೀ, ಧರ್ಮದವರಾಗಿರಲಿ ಅವರನ್ನು ಎಚ್ಚರಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಅಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ನಿನ್ನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಅನೇಕ ಹಿಂದುಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ರೀತಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರು ಕೂಡ ನಡೆಸಬಾರದು ಎಂದರು.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯನ್ನು ನಾವು ಶಾಂತಿಯುತವಾಗಿ ನಡೆದಿದೆ.‌ಬಆದರೂ ಈದ್ ಮಿಲಾದ್ ಮೆರವಣಿಗೆ ವೇಳೆ ಈ ರೀತಿ ನಡೆದಿರುವುದು ದುರಂತ. ಈ ಕೃತ್ಯ ಯಾರು ಮಾಡಿದ್ರು, ಯಾಕೆ ಮಾಡಿದ್ರು ಅವರ ಮೇಲೆ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಶಿವಮೊಗ್ಗ ಶಾಂತಿಯುತವಾಗಿರಬೇಕು ಎಂದರು.

ರಾಗಿಗುಡ್ಡದಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಶಾಶ್ವತ ಪರಿಹಾರ ಕಂಡು ಹಿಡಿಯಬೇಕಿದೆ. ಪೊಲೀಸರ ವಾಹನ‌ ನಿಲ್ಲಿಸಿಕೊಂಡು ಹಬ್ಬ ಆಚರಣೆ ಮಾಡುವಂತಾಗಬಾರದು. ತಪ್ಪು ಮಾಹಿತಿ ಹಾಗೂ ವದಂತಿಗಳಿಗೆ ಯಾರು ಕಿವಿಗೊಡಬಾರದು. ಹೊರಗಿನಿಂದ ಬಂದವರು ಯಾರು ? ಯಾಕೆ ಎಂಬುದು ತಿಳಿಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

5 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

8 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

9 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

14 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

15 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago