Shivamogga | ಪರಿಸರ ದಸರಾದಲ್ಲಿ ಸೈಕಲ್ ಜಾಥಾ

0 48

ಶಿವಮೊಗ್ಗ: ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾ ಅಂಗವಾಗಿ ಪರಿಸರ ದಸರಾ ಸಮಿತಿ ವತಿಯಿಂದ ಅ.15ರ ನಾಳೆ ಬೆಳಿಗ್ಗೆ 6 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ಹಮ್ಮಿಕೊಂಡಿರುವ ಸೈಕಲ್ ಜಾಥಾವನ್ನು  ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಉದ್ಘಾಟಿಸಲಿದ್ದಾರೆ ಎಂದು ಸಮಿತಿ ಅಧ್ಯಕ್ಷೆ ಯಮುನಾ ರಂಗೇಗೌಡ ತಿಳಿಸಿದರು.


ಅವರು ಶನಿವಾರ ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಾಥಾವು ಗೋಪಿ ವೃತ್ತ ಸೇರಿದಂತೆ ನಗರದ ವಿವಿಧ ಪ್ರಮುಖ ರಸ್ತೆಗಳ ಮೂಲಕ ಸಾಗಿ ಮತ್ತೆ ಪಾಲಿಕೆ ಆವರಣ ತಲುಪಲಿದೆ ಎಂದರು.


ಅ.16ರ ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಪರಿಸರ ದಸರಾವನ್ನು ಬಸವಕೇಂದ್ರ ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಹ್ಯಾದ್ರಿ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ ನಾಗರಾಜ್ ಪರಿಸರ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿರುವ ಶಿವಮೊಗ್ಗದ ಎನ್‌ಜಿಒ ಸಂಸ್ಥೆಗಳಾದ ಪರೋಪಕಾರಂ ತಂಡ, ಗೋ ಗ್ರೀನ್, ನಿರ್ಮಲ ತುಂಗಾ ಅಭಿಯಾನ, ಅಹ್ಮದೀಯ ಮುಸ್ಲಿಂ ಜಮಾತೆ ಹಾಗೂ ಗಿಡಗಳಿಗೆ ಪ್ರತಿದಿನ ನೀರು ಹಾಕುತ್ತಿರುವ ಮರಿಯಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದರು.


ಅ.22ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಕುಡಿಯುವ ಹಾಗೂ ದಿನಬಳಕೆಗೆ ಉಪಯೋಗಿಸುವ ನೀರಿನ ಸಂರಕ್ಷಣೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಖ್ಯ ಅತಿಥಿಯಾಗಿ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಆಗಮಿಸಲಿದ್ದಾರೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್. ಎನ್. ಚನ್ನಬಸಪ್ಪ, ಪಾಲಿಕೆ ಸದಸ್ಯರಾದ ಅನಿತಾ ರವಿಶಂಕರ್, ಮೆಹೆಕ್ ಷರೀಫ್, ಶಂಕರ್‌ಗನ್ನಿ, ಎಸ್. ಜ್ಞಾನೇಶ್ವರ್ ಇನ್ನಿತರರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!