Shivamogga | ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ

0 171

ಶಿವಮೊಗ್ಗ : ಶಿವಮೊಗ್ಗ ದಸರಾ ಮಹೋತ್ಸವ 2023 ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶಿಲ್ದಾರ್ ನಾಗರಾಜ್ ಸಾಂಪ್ರದಾಯಿಕ ಅಂಬು ಕಡಿದರು. ಈ ಸಂಭ್ರಮದ ಕ್ಷಣವನ್ನು ಸಾವಿರಾರು ಜನ ಕಣ್ತುಂಬಿಕೊಂಡರು.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿರುವ ಬನ್ನಿ ಮಂಟಪದಲ್ಲಿ ವಿಶಿಷ್ಠ ಸಂಭ್ರಮದ ಬನ್ನಿಮುಡಿಯುವ ಕಾರ್ಯಕ್ರಮಕ್ಕೆ ಸಾವಿರಾರು ಜನರು ಸಾಕ್ಷಿಯಾದರು.

ನೆರೆದಿದ್ದ ಜನರು ಬನ್ನಿ ಮುಡಿದು ಒಳ್ಳೆಯದನ್ನು ಹರಸಿದರು. ತಹಶೀಲ್ದಾರ್ ನಾಗರಾಜ್ ಅಂಬು ಕಡಿಯುತ್ತಿದ್ದಂತೆ ಜನರು ಘೋಷಣೆ. ಪರಸ್ಪರರು ಬನ್ನಿ ಹಂಚಿಕೊಂಡರು ಬನ್ನಿ ಮುಡಿದು ಬಾಳು ಬಂಗಾರವಾಗಲಿ ಎಂದು ಹಾರೈಸಿದರು.

ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಬನ್ನಿ ಮಂಟಪದ ಮೇಲೆ ಬನ್ನಿ ಹಂಚಿಕೊಂಡರು. ಅಂಬು ಕಡಿಯುತ್ತಿದ್ದಂತೆ ಫ್ರೀಡಂ ಪಾರ್ಕ್‌’ನಲ್ಲಿ ಸ್ಥಾಪಿಸಲಾಗಿದ್ದ ರಾವಣನ ಪ್ರತಿಕೃತಿಯನ್ನು ದಹಿಸಲಾಯಿತು.

ಬಾಣ ಬಿರುಸುಗಳ ಸೊಬಗು ಮುಗಿಲೆತ್ತರದಲ್ಲಿ ಕಣ್ಮನ ರಂಜಿಸಿತು. ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ಫ್ರೀಡಂ ಪಾರ್ಕ್ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Leave A Reply

Your email address will not be published.

error: Content is protected !!