ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಗಿಗುಡ್ಡದ ಕಹಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಧರ್ಮಗಳನ್ನು ನೋಡದೇ ಹಲವರನ್ನು ಬಂಧಿಸಿ ಜೈಲಿಗಟ್ಟಿದೆ. ಯಾವ ಧರ್ಮದವರನ್ನು ಓಲೈಸುವ ಪ್ರಶ್ನೆಯೇ ಇಲ್ಲ. ತಪ್ಪು ತಪ್ಪೇ. ಆದರೆ, ಬಿಜೆಪಿಯ ಈಶ್ವರಪ್ಪ ಮತ್ತು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಚೋದನಾಕಾರಿ ಹೇಳಿಕೆ ನೀಡಿ ಮತ್ತಷ್ಟು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಯಾರೂ ಕುಮ್ಮಕ್ಕು ಕೊಡಬಾರದು. ಶಾಂತಿಗಾಗಿ ಪ್ರಯತ್ನಿಸಬೇಕು. ಬಿಜೆಪಿ ನಾಯಕರಿಗೂ ನಾನು ಮನವಿ ಮಾಡುತ್ತೇನೆ. ತಪ್ಪು ಮಾಡಿದವರು ಯಾರೇ ಆಗಲಿ ಅವರಿಗೆ ಶಿಕ್ಷೆ ಖಚಿತವಾಗಿರುತ್ತದೆ. ಓಲೈಕೆಯ ಪ್ರಶ್ನೆಯೇ ಇಲ್ಲ. ಈಗಾಗಲೇ ಉಸ್ತುವಾರಿ ಸಚಿವರು ಘಟನೆಗೆ ಸಂಬಂಧಿಸಿದಂತೆ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ವಿಚಾರಿಸಿದ್ದಾರೆ. ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಹೊರಗಡೆಯಿಂದ ಯಾರೂ ಬಂದಿರಲಿಕ್ಕೆ ಸಾಧ್ಯವಿಲ್ಲ. ಆಕಸ್ಮಾತ್ ಬಂದಿದ್ದರೆ ಪೊಲೀಸರ ಬಳಿ ಸಾಕ್ಷ್ಯಗಳಿವೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಮಾಧ್ಯಮಗಳು ಅದರಲ್ಲೂ ದೃಶ್ಯ ಮಾಧ್ಯಮಗಳು ಇಂತಹ ಸಂದರ್ಭದಲ್ಲಿ ಸಂಯಮದಿಂದ ವರ್ತಿಸಬೇಕಾಗುತ್ತದೆ. ವೈಭವೀಕರಿಸಬೇಕಾದ ಅಗತ್ಯವಿಲ್ಲ. ಶಾಂತಿಗೆ ಭಂಗ ತರಬಾರದು. ರಾಜಕಾರಣಿಗಳು ಕೂಡ ರಾಜಕೀಯ ಲಾಭಕ್ಕಾಗಿ ಮಾತನಾಡುವುದು ಬೇಡ. ಅಲ್ಲಿನ ಜನರಿಗೆ ಭಯವನ್ನು ಉಂಟು ಮಾಡಬಾರದು. ಅಭಯವನ್ನು ನೀಡಬೇಕು. ಒಟ್ಟಾರೆ ಶಿವಮೊಗ್ಗದಲ್ಲಿ ಶಾಂತಿ ಕಾಪಾಡಬೇಕು. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳ, ಎಲ್ಲಾ ನಾಯಕರ ಹೊಣೆಯೂ ಕೂಡ ಇದೇ ಆಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಸಿ. ಯೋಗೀಶ್, ಅಕ್ರಂ ಪಾಶ, ಮೆಹಖ್ ಶರೀಫ್, ಯಮುನಾ ರಂಗೇಗೌಡ, ಚಂದ್ರ ಭೂಪಾಲ್ ಮೊದಲಾದವರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…