ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ಮೂಲಕ ಬಂಧಿಸಿರುವ ಘಟನೆ ನಡೆದಿದೆ.
ಸೈಫುಲ್ಲಾ ಖಾನ್ ಸೈಫು ಎಂಬ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ದೊಡ್ಡದಾನವಂದಿ ಅರಣ್ಯದ ಬಳಿ ಪೊಲೀಸರು ಫೈರಿಂಗ್ ಮಾಡಿದ್ದು ಪ್ರಕರಣವೊಂದರಲ್ಲಿ ಬಂಧನಕ್ಕೆ ತೆರಳಿದ್ದ ವೇಳೆ ಸೈಫು ಪೊಲೀಸರ ಮೇಲೆ ಹಲ್ಲೆ ಮಾಡಿದ ಪರಿಣಾಮವಾಗಿ ಕಾಲಿಗೆ ಫೈರಿಂಗ್ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿ ನಾಗರಾಜ್ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್ ಸೈಫು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ ಪಿಎಸ್ಐ ನವೀನ್. ಮಾತು ಕೇಳದ ಹಿನ್ನೆಲೆ ಸೈಫು ಕಾಲಿಗೆ ಜಯನಗರ ಠಾಣೆ ಪಿಎಸ್ಐ ನವೀನ್ ಶಾಟ್ ಫೈರ್ ಮಾಡಿದ್ದಾರೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. https://fb.watch/lyIsg52pgf/?mibextid=ZbWKwL
ಗಾಯಾಳು ಸೈಫು ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಶಿವಮೊಗ್ಗದ ದೊಡ್ಡಪೇಟೆ ಠಾಣೆಯೊಂದರಲ್ಲೇ ಸೈಫು ಮೇಲೆ 16 ಕೇಸ್ ದಾಖಲಾಗಿದೆ. ತುಂಗಾನಗರ ಹಾಗೂ ಜಯನಗರ ಠಾಣೆಯಲ್ಲಿ ತಲಾ ಒಂದು ಕೇಸ್ ಸೈಫುಲ್ಲಾ ಖಾನ್ ಹೊಂದಿದ್ದಾನೆ.
ಜಯನಗರ ಠಾಣೆಯ ಕೇಸ್ 307 ಅಡಿ ಇಂದು ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಈ ಸಂಬಂಧ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…