Shivamogga | ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ !

0 530

ಶಿವಮೊಗ್ಗ : ಕರಡಿಯೊಂದು (Bear) ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ. ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿ ಬಂದ ಕರಡಿ ತುಕಾರಾಂ ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದೆ.

ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಕರಡಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗೋಪಾಲಗೌಡ ಬಡಾವಣೆಯ ಎಫ್‌ ಬ್ಲಾಕ್‌ನಲ್ಲಿರುವ ಡಿವಿಜಿ ಪಾರ್ಕ್‌ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು ಇದೀಗ ಅಲ್ಲಿನ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

Leave A Reply

Your email address will not be published.

error: Content is protected !!