Categories: Shivamogga

Shivamogga | ವೈಭವದ ಜಂಬೂ ಸವಾರಿಗೆ ಕ್ಷಣಗಣನೆ

ಶಿವಮೊಗ್ಗ: 9 ದಿನಗಳ ಕಾಲ  ರಾಜ್ಯದಲ್ಲೇ ಎರಡನೇ ಅತೀ ದೊಡ್ಡ ಮತ್ತು ವೈವಿಧ್ಯಮಯ ವೈಭವ ಪೂರ್ಣ ದಸರಾ ಎಂದು ಹೆಸರಾದ ಶಿವಮೊಗ್ಗ ದಸರಾದ ಹತ್ತನೇ ದಿನ ವಿಜಯ ದಶಮಿ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರದ ವೈಭವದ ಅಂಭಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ.


ಇಂದು ಮಧ್ಯಾಹ್ನ 2.30ಕ್ಕೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ ಶ್ರೀದೇವಿಯ ವಿಗ್ರಹದ ಮೆರವಣಿಗೆ ಕೋಟೆ ರಸ್ತೆಯ ಶಿವಪ್ಪ ನಾಯಕ ಅರಮನೇ ಆವರಣದಿಂದ ನಂದೀಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆಗೊಳ್ಳಲಿದೆ. ನಂತರ ಅಲಂಕೃತ ಶ್ರೀಚಾಮುಂಡೇಶ್ವರಿ ದೇವಿಯ ಮೆರವಣಿಗೆಯಲ್ಲಿ ಅಂಬಾರಿಯನ್ನು ಹೊರುವ ಸಾಗರ್ ಮತ್ತು ಎಡಕ್ಕೆ ಮತ್ತು ಬಲಕ್ಕೆ ನೇತ್ರಾವತಿ ಹಾಗೂ ಹೇಮಾವತಿ ಇವರೊಂದಿಗೆ ಮೆರವಣಿಗೆಯಲ್ಲಿ ಮಂಗಳವಾಧ್ಯ ಸಮಾಳವಾದ್ಯ, ನಂದಿಧ್ವಜ ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಯಕ್ಷಗಾನ, ಕೀಲುಕುದುರೆ, ನಗಿಸುವ ಗೊಂಬೆಗಳ ಕುಣಿತ, ದೊಡ್ಡ ಗೊಂಬೆಗಳ ಕುಣಿತ, ಕುಂಡ ಹೊತ್ತ ಮಹಿಳೆಯ ಕುಣಿತ, ಮಹಿಳಾ ಡೊಳ್ಳು ಕುಣಿತ ಹುಲಿವೇಷ ಕುಣಿತ, ರೋಡ್ ಆರ್ಕೇಸ್ಟ್ರಾ ಹಾಗೂ ವಿವಿಧ ಕಲಾ ತಂಡಗಳಿಂದ ಮೆರವಣಿಗೆ ಸಾಗಲಿದೆ.


ಅಲ್ಲದೇ ನಗರದ 200ಕ್ಕೂ ಹೆಚ್ಚು ದೇವರುಗಳು ಈ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಇಡೀ ನಗರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸಂಜೆ 6-30ಕ್ಕೆ ಮೆರವಣಿಗೆ ಫ್ರೀಡಂ ಪಾರ್ಕ್‌ಗೆ ತಲುಪಲಿದ್ದು, ಶಿವಮೊಗ್ಗ ತಾಲ್ಲೂಕು ದಂಡಾಧಿಕಾರಿಗಳು ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬನ್ನಿ ಮುಡಿದ ನಂತರ ಅತ್ಯಾಕರ್ಷಕ ಪಟಾಕಿ ಸಿಡಿಮದ್ದು, ರಾವಣ ದಹನ ಏರ್ಪಡಿಸಲಾಗಿದೆ.


ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ವಿವಿಧ ದಿಗ್ಗಜ ಕಲಾವಿದರಿಂದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದು, ಸಂಸದರು, ಶಾಸಕರು, ಹಾಗೂ ಎಲ್ಲಾ ಜನ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ನಾಡಿನ ಪ್ರಸಿದ್ಧ ದಸರಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಚಾಮುಂಡೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಶಿವಮೊಗ್ಗ ದಸರಾ ಸಮಿತಿ ವಿನಂತಿಸಿದೆ.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

13 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

13 hours ago