Categories: Shivamogga

Shivamogga | ಶಾಂತಿಗಾಗಿ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಿ ; ಎಸ್‌ಪಿ ಮಿಥುನ್ ಕುಮಾರ್

ಶಿವಮೊಗ್ಗ : ಶಾಂತಿನಗರದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು. ಯಾರೋ ಮಾಡುವ ತಪ್ಪಿಗೆ ಎಲ್ಲರೂ ಜವಬ್ದಾರರಾಗುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ (Shivamogga SP) ಮಿಥುನ್‌ಕುಮಾರ್ ಹೇಳಿದ್ದಾರೆ.


ನಿನ್ನೆ ಶಾಂತಿನಗರದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಶಾಂತಿನಗರದಲ್ಲಿ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ನಮ್ಮ ಗಮನಕ್ಕೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಆದರೆ ಕ್ಲುಲಕ ಕಾರಣಕ್ಕಾಗಿ ಸಮುದಾಯಗಳ ನಡುವೆ ಘರ್ಷಣೆ ಉಂಟಾದರೆ ಪೊಲೀಸರು ತಮ್ಮದೇ ಆದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಅನೇಕ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಸೆಕ್ಷನ್ ಹಾಕಿದಾಗ ಶಾಲಾ-ಕಾಲೇಜು ಮಕ್ಕಳಿಗೆ, ವೃದ್ಧರಿಗೆ, ರೋಗಿಗಳಿಗೆ ಎಲ್ಲರಿಗೂ ಕೂಡ ಸಮಸ್ಯೆಯಾಗುತ್ತದೆ. ಪೊಲೀಸರು ಕೂಡ ಮನುಷ್ಯರೇ ತಮ್ಮ ಮನೆ ಮಠ ಬಿಟ್ಟು ಶಾಂತಿ ಸ್ಥಾಪನೆಗಾಗಿ ವಾರಗಟ್ಟಲೆ ಇಲ್ಲೆ ಕಾಯಬೇಕಾಗುತ್ತದೆ. ಘರ್ಷಣೆಯ ಪರಿಣಾಮ ಎಲ್ಲರಿಗೂ ಅರಿವಾಗಿದೆ. ಅನೇಕ ಸ್ಥಳೀಯ ಹಿರಿಯ ನಿವಾಸಿಗಳು ಇನ್ನೂ ಮುಂದೆ ಈ ರೀತಿ ಹಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ.

ದೇವಸ್ಥಾನ ಸಮಿತಿ, ಮಸೀದಿ ಸಮಿತಿಯ ಹಿರಿಯರು ಮತ್ತು ನಾಗರಿಕರು ಸೇರಿ ಶಾಂತಿ ಪಡೆಯನ್ನು ಕಟ್ಟಿದ್ದಾರೆ. ಇಡೀ ರಾಗಿಗುಡ್ಡ ಮತ್ತು ಶಾಂತಿನಗರದಲ್ಲಿ ನಾವೆಲ್ಲರೂ ಸೇರಿ ಸ್ವಚ್ಛತ ಅಭಿಯಾನ ಮಾಡೋಣ. ಪ್ರತಿ ತಿಂಗಳಿಗೊಮ್ಮೆ ಸಭೆ ಸೇರಿ ಜಾತಿ, ಮತ ಭೇದ ಮರೆತು ಒಂದಾಗಿ ಅವಲೋಕನ ಮಾಡೋಣ. ಯುವ ಶಕ್ತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡೋಣ ಎಂದರು.


ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ, ಈ ಪ್ರದೇಶದಲ್ಲಿ ಅನೇಕ ದೂರುಗಳಿವೆ. ಒಳಚರಂಡಿ, ಕುಡಿಯುವ ನೀರು, ಹಕ್ಕುಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಬಸ್, ಬೀದಿ ದೀಪ ವ್ಯವಸ್ಥೆ, ಬೇಕೆಂಬುವುದು ಅನೇಕ ವರ್ಷದ ಬೇಡಿಕೆ, ಎಲ್ಲವನ್ನೂ ಕೂಡ ಬಗೆಹರಿಸಲಾಗುವುದು. ಈಗಾಗಲೇ ಡಿ.ಎಚ್.ಓ. ಜೊತೆ ಮಾತನಾಡಿದ್ದೇನೆ. ನಮ್ಮ ಕ್ಲಿನಿಕ್‌ನ್ನು ತೆರೆಯಲಾಗುವುದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀರು, ಒಳಚರಂಡಿ, ಬೀದಿ ದೀಪ, ಶಾಲೆ, ಬಸ್ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಣಪತಿ ಹಬ್ಬಕ್ಕೂ ಮುನ್ನ ಮೂರು ತಿಂಗಳ ಹಿಂದಿನಿಂದಲೂ ಹಲವಾರು ಸಭೆಗಳನ್ನು ಮಾಡಿ, ನಾವು ಸಾರ್ವಜನಿಕರಿಗೆ ತಿಳಿ ಹೇಳಿದ್ದೇವು, ಕೆಲವರು ಪ್ರತಿಷ್ಠೆಗಾಗಿ ಅನಾವಶ್ಯಕವಾಗಿ, ಅಹಿತಕರ ವಾತಾವರಣ ಸೃಷ್ಟಿ ಮಾಡುತ್ತಾರೆ. ಎಲ್ಲವನ್ನು ಮರೆತು ಇನ್ನು ಮುಂದೆ ಈ ರೀತಿಯ ಆಗಾದಾಗೆ ಕ್ರಮ ವಹಿಸೋಣ ಎಂದರು.


ಈ ಸಂದರ್ಭದಲ್ಲಿ ಸ್ಥಳೀಯರು ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಬೆಳಕು ಚೆಲ್ಲಿದರು. ವಕೀಲರಾದ ರಾಘವೇಂದ್ರ, ಮೇರಿ ಅಮ್ಮ, ಕುಮಾರ್, ಭಾಷಾ ಸಾಹೇಬ್, ಮಸೀದಿ ಕಮಿಟಿಯ ಮುನ್ನಾ ಸಾಹೇಬ್ ಮೊದಲಾದವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


ಶಾಂತಿನಗರದ ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನಾವಿಲೆ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಡಿ.ವೈ.ಎಸ್.ಪಿ. ಸುರೇಶ್, ಕಂದಾಯಾಧಿಕಾರಿ ನಾಗೇಂದ್ರ, ಪಿ.ಎಸ್.ಐ. ಸತ್ಯನಾರಾಯಣ್, ಸೈಮನ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

11 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

11 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

12 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

13 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

16 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

18 hours ago