Categories: Shivamogga

Shivamogga | ಸಿಹಿ ವಿತರಣೆ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ !

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ಶಿವಪ್ಪನಾಯಕ ವೃತ್ತದಲ್ಲಿ ಇಂದು ಬಿಜೆಪಿ ಜಿಲ್ಲಾ ಘಟಕದಿಂದ ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಸಂಭ್ರಮಾಚರಣೆ ನಡೆಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರ ‘ಜೈ ಶ್ರೀರಾಮ್’ ಘೋಷಣೆಗೆ ಪ್ರತಿಯಾಗಿ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದರು. ಇದು ಕೆಲಕಾಲ ಸ್ಥಳದಲ್ಲಿ ಗೊಂದಲ ಸೃಷ್ಟಿಸಿತು.

ಮುಸ್ಲಿಂ ಮಹಿಳೆಯ ಘೋಷಣೆಗೆ ಸ್ಥಳದಲ್ಲಿದ್ದ ಹಿಂದು ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಂದಲೂ ಜೈಶ್ರೀರಾಮ್ ಘೋಷಣೆ ಮೊಳಗಿತು. ಈ ಮಧ್ಯೆ, ಮುಸ್ಲಿಂ ಮಹಿಳೆಯನ್ನು ಬಂಧಿಸುವಂತೆ ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಪೊಲೀಸರನ್ನು ಆಗ್ರಹಿಸಿದರು.

ಮುಸ್ಲಿಂ ಮಹಿಳೆ ಗೊಂದಲ ಸೃಷ್ಟಿಸುತ್ತಿದ್ದರೂ ಸುಮ್ಮನಿದ್ದೀರಾ ಎಂದು ಪೊಲೀಸರನ್ನು ಕಾಂತೇಶ್ ತರಾಟೆಗೆ ತೆಗೆದುಕೊಂಡರು. ನಂತರ ಪೊಲೀಸರು ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕರೆದೊಯ್ದರು.

ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ರಾಜ್ಯದಾದ್ಯಂತ ಬಿಜೆಪಿ ನಾಯಕರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅಂತೆಯೇ ಹಿಂದೂ ಸಂಘಟನೆಗಳು ಸಹ ಸಿಹಿ ವಿತರಣೆ, ಪೂಜೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಅದರಂತೆ ಶಿವಮೊಗ್ಗದಲ್ಲಿಯೂ ಸಿಹಿ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದಾಗ ಮುಸ್ಲಿಂ ಮಹಿಳೆಯ ಘೋಷಣೆಯಿಂದ ಕೆಲ ಕಾಲ ತುಸು ಉದ್ವಿಗ್ನ ವಾತಾವರಣ ಉಂಟಾಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago