Categories: Shivamogga

Shivamogga | ಸ್ಟ್ರಾಂಗ್ ರೂಂ ಸೇರಿದ ಮತ ಯಂತ್ರಗಳು ; ಪೊಲೀಸ್ ಸರ್ಪಗಾವಲು

ಶಿವಮೊಗ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯವಾದ ಬೆನ್ನಲ್ಲೇ ಮತಯಂತ್ರಗಳನ್ನು ಸಹ್ಯಾದ್ರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿರಿಸಲಾಗಿದ್ದು, ಭದ್ರತಾ ಸರ್ಪಗಾವಲು ಹಾಕಲಾಗಿದೆ.

ಮತ ಎಣಕೆ ಕಾರ್ಯ ಸಹ್ಯಾದ್ರಿ ಕಾಲೇಜಿನಲ್ಲಿ ಮೇ 13ರಂದು ನಡೆಯಲಿದ್ದು, ಅಲ್ಲಯೇ ಸ್ಟ್ರಾಂಗ್ ರೂಂ ಸ್ಥಾಪನೆ ಮಾಡಲಾಗಿದೆ. ನಿನ್ನೆ ಸಂಜೆ ಮತದಾನ ಮುಕ್ತಾಯವಾದ ನಂತರ ಡಿಮಸ್ಟರಿಂಗ್ ಕೇಂದ್ರಗಳಿಗೆ ಯಂತ್ರಗಳನ್ನು ಕೊಂಡೊಯ್ದು, ಅಧಿಕಾರಿಗಳಿಗೆ ವಹಿಸಲಾಗಿದೆ. ಆನಂತರ ಸ್ಟ್ರಾಂಗ್ ರೂಂಗೆ ತಂದು ಕ್ಷೇತ್ರವಾರು ಜೋಡಿಸಲಾಗಿದೆ. ನಸುಕಿನವರೆಗೂ ಈ ಪ್ರಕ್ರಿಯೆ ನಡೆದಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ.

ಹೇಗಿದೆ ಗೊತ್ತಾ ಭದ್ರತಾ ವ್ಯವಸ್ಥೆ?
ಮತಯಂತ್ರಗಳನ್ನು ಇರಿಸಲಾಗಿರುವ ಕೊಠಡಿಗಳ ಬಾಗಿಲು ಹಾಗೂ ಕಿಟಕಿಗಳಿಗೆ ಫ್ಲೇವುಡ್ ಮುಚ್ಚಿ, ಮೊಳೆ ಹೊಡೆದು, ಸೀಲ್ ಮಾಡಲಾಗಿದೆ.


ಪ್ರಮುಖವಾಗಿ, ಸ್ಟ್ರಾಂಗ್ ರೂಂ ಮುಂಭಾಗ ಹಾಗೂ ಸುತ್ತಲೂ ಸಿಆರ್’ಪಿಎಫ್ ಯೋಧರು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಕಟ್ಟಡದ ಸುತ್ತಲೂ ಹದ್ದಿನ ಕಣ್ಣಿಡಲು ವಿಶೇಷ ಲೈಟ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಈ ಕಟ್ಟಡದ ಸುತ್ತಲೂ ಸುಳಿಯದಂತೆ ಹದ್ದಿನ ಕಣ್ಣಿಡಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಭೇಟಿ
ಇನ್ನು, ಸ್ಟ್ರಾಂಗ್ ರೂಂ ಕಟ್ಟಡಕ್ಕೆ ಭೇಟಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪರಿಶೀಲನೆ ನಡೆಸಿದರು.

Malnad Times

Recent Posts

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

36 mins ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

3 hours ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

3 hours ago

Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…

9 hours ago

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

19 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

21 hours ago