Categories: Shivamogga

Shivamogga Airport | ಎಲ್ಲಾ ಹವಾಗುಣದಲ್ಲೂ ವಿಮಾನ ಇಳಿಯಲು ಕ್ರಮ ; ಬಿವೈಆರ್

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಹಾಗೂ ಅನುಮತಿ ವಿಸ್ತರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ವಿಮಾನ ಕಾರ್ಯಾಚರಣೆಗಳ ಸಿದ್ಧತೆ ನಡೆಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.


ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫ್ಲೈಟ್ ಕಾರ್ಯಾಚರಣೆ ಮುಂದುವರಿಸಲು ಪರಿಹರಿಸಬೇಕಾದ ಸಮಸ್ಯೆಗಳ ಬಗ್ಗೆ ಮತ್ತು ಬಿಡಿಡಿಎಸ್ ಸಲಕರಣೆಗಳ ನಿಯೋಜಿಸುವ ಬಗ್ಗೆ ನಿನ್ನೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅವರಿಂದ ಸಕಾರಾತ್ಮಕ ಭರವಸೆ ಸಿಕ್ಕಿದೆ ಎಂದರು.


ಎಲ್ಲಾ ಹವಾಗುಣದಲ್ಲೂ ವಿಮಾನ ಇಳಿಯಲು ಮತ್ತು ರಾತ್ರಿ ವೇಳೆಯಲ್ಲಿ ಸಹ ಇಳಿಯಲು ಮತ್ತು ಹೊರಡಲು ಬೇಕಾಗಿರುವ ಯಂತ್ರೋಪಕರಣಗಳನ್ನು ಒದಗಿಸಲು, ಶಿವಮೊಗ್ಗದ ವಿಮಾನ ನಿಲ್ದಾಣದ ಅಭಿವೃದ್ಧಿ ಹಾಗೂ ಮುಂದಿನ ದೃಷ್ಟಿಕೋನ ಇಟ್ಟುಕೊಂಡು ನಿಲ್ದಾಣದ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಖ್ಯವಾಗಿ ವಿಮಾನ ನಿಲ್ದಾಣ ಭದ್ರತೆ ಹಾಗೂ ಬಾಂಬ್ ಬೆದರಿಕೆ ಬಗ್ಗೆ ವಿಮಾನ ಯಾನ ಭದ್ರತಾ ಬ್ಯೂರೋ ತಾತ್ಕಾಲಿಕವಾಗಿ ಅನುಮೋದಿಸಿದೆ. ಮತ್ತು ಸಂಗ್ರಹಣೆಗಾಗಿ ಮೂರು ತಿಂಗಳ ಗಡುವು ನೀಡಲಾಗಿದೆ. ನ.28ರಂದು ಈ ಗಡುವು ಅಂತ್ಯಗೊಳ್ಳಲಿದೆ. ಅದನ್ನು ಮತ್ತೆ ನವೀಕರಣ ಮಾಡಬೇಕಾಗಿದೆ ಎಂದರು.


ಇದರ ನಡುವೆ ಸ್ಟಾರ್ ಏರ್ ಕಂಪೆನಿಯು ನ.21ರಿಂದ ತನ್ನ ಸೇವೆ ಆರಂಭಿಸುತ್ತದೆ. ಇದರ ಮಾನ್ಯತೆಯು ಕೂಡ ನ.28ರವರೆಗೆ ಇರುತ್ತದೆ. ಆದ್ದರಿಂದ ಬಿಸಿಎಎಸ್ ಮತ್ತು ಡಿಜಿಸಿಎ ಇಂದ ಕೇವಲ 7ದಿನಗಳ ವರೆಗೆ ಅನುಮೋದನೆಯನ್ನು ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದಲ್ಲಿ ಸೌಕರ್ಯಗಳನ್ನು ನೀಡಬೇಕಾಗಿದೆ. ರಾಜ್ಯ ಸರ್ಕಾರ ಇದಕ್ಕೆ ತನ್ನ ಅನುಮತಿ ನೀಡಿದೆ ಎಂದರು.


ಇದಲ್ಲದೆ ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೋಟೆಲ್‌ಗಳು, ಮಾಲ್‌ಗಳು ಸಂಕೀರ್ಣಗಳನ್ನು ಸ್ಥಾಪಿಸಲಾಗುವುದು. ಮುಖ್ಯವಾಗಿ ವಿಸ್ತಾರ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳ ಮೂಲಕ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬೋಯಿಂಗ್ ಅಥವಾ ಏರ್‌ಬಸ್ ತರಬೇತಿ ನೀಡುವ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.


ಒಟ್ಟಾರೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಎಲ್ಲಾ ರೀತಿಯಲ್ಲೂ ಅಭಿವೃಧ್ಧಿ ಪಡಿಸಲು ಅನುಕೂಲವಾಗುವಂತೆರಾಜ್ಯ ಸರ್ಕಾರದ ನೆರವು ಪಡೆದು ಸುಸೂತ್ರ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಗುವುದು ಮತ್ತು ಬೇರೆ ಬೇರೆ ಸ್ಥಳಗಳಿಗೆ ಬೇರೆಬೇರೆ ವಿಮಾನ ಸಂಸ್ಥೆಗಳ ಮೂಲಕ ಹಾರಾಟಕ್ಕೆ ಅನುವು ಮಾಡಿಕೊಡಲಾಗುವುದು. ಪರವಾನಿಗೆಯನ್ನು ಕೂಡ ವಿಸ್ತರಿಸಲಾಗುವುದು. ಶಾಶ್ವತ ಪರವಾನಿಗೆಯತ್ತ ಚಿಂತನೆ ನಡೆದಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ರುದ್ರೇಗೌಡ, ಪ್ರಮುಖರಾದ ದತ್ತಾತ್ರಿ, ಶಿವರಾಜ್, ಮಾಲತೇಶ್, ಜಗದೀಶ್, ಬಿ.ಕೆ. ಶ್ರೀನಾಥ್, ಅಣ್ಣಪ್ಪ, ಶರತ್ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

23 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago