ಶಿವಮೊಗ್ಗ : ಬೈಂದೂರು ಕ್ಷೇತ್ರ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರಗಳಲ್ಲಿ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆದು ಗೆಲುವು ಸಾಧಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಅವರು ಇಂದು ನಗರದ ಕುವೆಂಪು ರಸ್ತೆಯಲ್ಲಿ ಬಿಜೆಪಿ ಗ್ರಾಮಾಂತರ ಕ್ಷೇತ್ರದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಯುದ್ಧಕಾಲೇ ಶಸ್ತ್ರಾಭ್ಯಾಸ ಎನ್ನುವ ಪಾರ್ಟಿಯಲ್ಲ. ಕಳೆದ ಐದು ವರ್ಷಗಳಿಂದ ಕಾರ್ಯಕರ್ತರ ತಪಸ್ಸಿನ ಸಂಘಟನೆಯ ಫಲವಿದೆ. ಪರಿಶ್ರಮವಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹಾಗಾಗಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ಪ್ರಧಾನಿ ಮೋದಿಯವರ ಬಂಡೀಪುರ ಭೇಟಿಗೆ ಸಂಬಂಧಿಸಿದಂತೆ ವಿಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, ವಿಪಕ್ಷಗಳು ಅಪಪ್ರಚಾರ ಮಾಡುತ್ತಾ ಬಂದಿವೆ. ಪ್ರಚಾರಕ್ಕೆ ಬೇರೆ ಯಾವುದೇ ವಿಷಯಗಳಿಲ್ಲ. ಇಟಲಿ ದೇಶದ ಗ್ಲಾಸ್ ಹಾಕಿ ನೋಡುವವರಿಗೆ ಎಲ್ಲವೂ ತಪ್ಪಾಗಿಯೇ ಕಾಣುತ್ತದೆ. ಹೀಗೆಯೇ ಟೀಕೆ ಮುಂದುವರಿಸಿದರೆ ಅವರಿಗೆ ವಿಪಕ್ಷ ಸ್ಥಾನವೂ ಸಿಗುವುದಿಲ್ಲ ಎಂದರು.
ಶಿಕಾರಿಪುರ ಮತದಾರರ ಮತ್ತು ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಪಕ್ಷ ಅವಕಾಶ ನೀಡಿದಲ್ಲಿ ವಿಜಯೇಂದ್ರ ಅವರು ಸ್ಪರ್ಧಿಸುತ್ತಾರೆ. ಹೆಚ್ಚಿನ ಅಂತರದಿಂದ ಗೆಲ್ಲುತ್ತಾರೆ. ಈ ಬಗ್ಗೆ ಸಂಶಯ ಬೇಡ ಎಂದ ಅವರು, ಶಾಸಕ ಆಯನೂರು ಮಂಜುನಾಥ್ ಅವರು ಪಕ್ಷಕ್ಕೆ ರೆಬೆಲ್ ಆಗಿದ್ದಾರೆಯೇ ಎಂಬ ಪ್ರಶ್ನೆಗೆ ಸೂಕ್ತ ಸಂದರ್ಭದಲ್ಲಿ ಪಕ್ಷದ ಹಿರಿಯರು ಅವರ ಮನವೊಲಿಸುತ್ತಾರೆ ಎಂದರು.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…