Categories: Shivamogga

Shivamogga | Narendra Modi | Arecanut | ಅಡಿಕೆ ಬೆಳೆಗಾರರ ಹಿತ ಕಾಪಾಡಿದ್ದು ಬಿಜೆಪಿ ; ನರೇಂದ್ರ ಮೋದಿ

ಶಿವಮೊಗ್ಗ: ‘ಪ್ರತಿ ಕೆ.ಜಿ.ಗೆ 100 ರೂ. ಇದ್ದ ಆಮದು ಶುಲ್ಕವನ್ನು 350 ರೂ.ಗೆ ಹೆಚ್ಚಿಸಿ ಕರ್ನಾಟಕದ ಅಡಿಕೆ ಬೆಳೆಗಾರರ ಹಿತ ಕಾಪಾಡಿದ್ದು ಬಿಜೆಪಿ’ ಎಂದು ತಾಲ್ಲೂಕಿನ ಆಯನೂರಿನಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮಲೆನಾಡಿನ ಅಡಿಕೆ ಬೆಳೆಗಾರರ ಮನಗೆಲ್ಲಲು ಪ್ರಯತ್ನಿಸಿದರು.

‘ವಿದೇಶದಿಂದ ಕಡಿಮೆ ಗುಣಮಟ್ಟದ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿ ಬೆಳೆಗಾರರನ್ನು ನಾಶ ಮಾಡಲು ಕಾಂಗ್ರೆಸ್ ಷಡ್ಯಂತ್ರ ನಡೆಸಿತ್ತು’ ಎಂದು ಆರೋಪಿಸಿದ ಮೋದಿ, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಗುಜರಾತ್‌ಗೆ ಬಂದು ನನ್ನನ್ನು ಭೇಟಿ ಮಾಡಿ, ಅಡಿಕೆ ಬೆಳೆಗಾರರ ಸಂಕಷ್ಟ ಬಿಚ್ಚಿಟ್ಟಿದ್ದರು. ಹೀಗಾಗಿ ಶುಲ್ಕ ಹೆಚ್ಚಿಸಿ ಆಮದು ಮಾಡಿಕೊಳ್ಳುವ ಅವಕಾಶ ತಪ್ಪಿಸಿದ್ದೆ’ ಎಂದರು.

‘ಅಡಿಕೆ ಆಮದು ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನೀತಿಯನ್ನು ತುಲನೆ ಮಾಡಿ ನಮ್ಮ ಪ್ರೀತಿ ಹೇಗಿದೆ ಎಂಬುದನ್ನು ಅರಿತು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

‘ಗ್ಯಾರಂಟಿ ಕಾರ್ಡ್‌ ನೆಪದಲ್ಲಿ ಕಾಂಗ್ರೆಸ್‌, ಸುಳ್ಳುಗಳ ಗಾಳಿ ತುಂಬಿದ ಬಲೂನನ್ನು ಹಾರಿಬಿಟ್ಟಿದೆ. ಆದರೆ, ಚುನಾವಣೆಗೆ ಮುನ್ನ ಜನರೇ ಆ ಬಲೂನನ್ನು ಒಡೆದಿದ್ದಾರೆ. ಯಡಿಯೂರಪ್ಪ ಅವರ ನೆಲದಲ್ಲಿ (ಶಿವಮೊಗ್ಗ) ನಿಂತು ನಾನು ಇಡೀ ಕರ್ನಾಟಕಕ್ಕೆ ಅಸಲಿ ಗ್ಯಾರಂಟಿ ಕೊಡುವೆ. ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತನ್ನಿ. ಕರ್ನಾಟಕದ ವಿಕಾಸದ ಮೂಲಕ ಬಡ್ಡಿ ಸಮೇತ ನಿಮ್ಮ ಪ್ರೀತಿ-ಋಣ ತೀರಿಸುವೆ’ ಎಂದು ಭರವಸೆ ನೀಡಿದರು.

’85 ಪರ್ಸೆಂಟ್ ಕಮಿಷನ್ ತಿನ್ನುವ ಕಾಂಗ್ರೆಸ್ ನಿಮ್ಮ ಉತ್ತಮ ಭವಿಷ್ಯ ರೂಪಿಸಲಿದೆಯೇ, ನಿಮ್ಮ ಅಪ್ಪ, ಅಜ್ಜ, ಮುತ್ತಜ್ಜ ಎದುರಿಸಿದ ಸಮಸ್ಯೆಯನ್ನು ನೀವು ಅನುಭವಿಸಬೇಕೇ’ ಎಂದ ಅವರು, ‘ಬಿಜೆಪಿ ಮಾತ್ರ ಯುವ ಮತದಾರರಿಗೆ ಸುಭದ್ರ ಭವಿಷ್ಯ ರೂಪಿಸಿಕೊಡಲಿದೆ’ ಎಂದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

8 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

10 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

11 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

12 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

13 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

15 hours ago