ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ಬಾಲಕರು ತುಂಗಾ ನದಿ ಪಾಲು !
ತೀರ್ಥಹಳ್ಳಿ : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ರಫನ್, ಅಯನ್, ಸಮರ್ ಮೃತ ಬಾಲಕರು. ಸಂಜೆ ರಾಮ ಮಂಟಪದ ಪಕ್ಕದಲ್ಲಿ ಈ ಘಟನೆ ನಡೆದಿದ್ದು, ಮೂವರು ಬಾಲಕರ ಶವಗಳು ಪತ್ತೆಯಾಗಿದೆ.
ಸತತವಾಗಿ ಒಂದು ಗಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾದರು ಬಳಿಕ ಕುಟುಂಬಸ್ಥರು ಮತ್ತು ಸ್ಥಳೀಯರು ಹುಡುಕಾಟಕ್ಕಿಳಿದಿದ್ದರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.