ಶಿವಮೊಗ್ಗ : ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿ ಕ.ಲೋ. ಪೊಲೀಸ್ ಅಧೀಕ್ಷಕ ಎನ್. ವಾಸುದೇವ ರಾಮರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿರುತ್ತಾರೆ.
ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿರುತ್ತಾರೆ. ಈ ಸಂದರ್ಭ ಕಂದಾಯ ನಿರೀಕ್ಷಕರು 40 ಸಾವಿರ ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಈ ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್ರವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು
ಬಂಧಿಸಿ ತನಿಖೆಗೆ ಒಳಪಡಿಸಿರುತ್ತಾರೆ.
ಕಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರ ನೇತೃತ್ವದಲ್ಲಿ ನಡೆಸಲಾಗಿದ್ದು, ಶಿವಮೊಗ್ಗ ಲೋಕಾಯುಕ್ತ ಕಛೇರಿಯ, ಪೊಲೀಸ್ ನಿರೀಕ್ಷಕರಾದ ಹೆಚ್.ಎಸ್. ಸುರೇಶ್, ಪೊಲೀಸ್ ಸಿಬ್ಬಂದಿಗಳಾದ ಮಹಂತೇಶ, ಸಿ.ಹೆಚ್.ಸಿ., ಸುರೇಂದ್ರ ಸಿ.ಹೆಚ್.ಸಿ., ಯೋಗೀಶ್, ಸಿ.ಹೆಚ್.ಸಿ., ಬಿ.ಟಿ. ಚನ್ನೇಶ, ಸಿಪಿಸಿ, ಪ್ರಶಾಂತ್ಕುಮಾರ್, ಸಿಪಿಸಿ, ಅರುಣ್ಕುಮಾರ್, ಸಿಪಿಸಿ, ದೇವರಾಜ, ಸಿ.ಪಿ.ಸಿ., ರಘುನಾಯ್ಕ, ಸಿ.ಪಿ.ಸಿ., ಕೆ.ಸಿ. ಜಯಂತ, ಎಪಿಸಿ, ವಿ. ಗೋಪಿ, ಎಪಿಸಿ ಮತ್ತು ಪ್ರದೀಪ್ ಕುಮಾರ್, ಎಪಿಸಿ, ಬಿ.ಕೆ.ಗಂಗಾಧರ, ಎಪಿಸಿ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…