Categories: Soraba

ಗೃಹರಕ್ಷಕ ದಳದ ವತಿಯಿಂದ ಸಚಿವ ಮಧು ಬಂಗಾರಪ್ಪನವರಿಗೆ ಮನವಿ

ಸೊರಬ: ಸಭೆ ಮತ್ತು ವಾರದ ಕವಾಯತು ನಡೆಸಲು ಸರ್ಕಾರಿ ಕಟ್ಟಡದಲ್ಲಿ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಗೃಹರಕ್ಷಕದಳದ ವತಿಯಿಂದ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ‌ ಅವರಿಗೆ ಮನವಿ ಸಲ್ಲಿಸಲಾಯಿತು.

ಗೃಹ ರಕ್ಷಕದಳದ ಘಟಕಾಧಿಕಾರಿ ಬಿ. ರೇವಣಪ್ಪ ಮಾತನಾಡಿ, ಪೊಲೀಸ್ ಇಲಾಖೆಗೆ ಸಹಾಯಕವಾಗಿ ಗೃಹರಕ್ಷಕ ದಳದ ಸದಸ್ಯರು ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಅನೇಕ ತುರ್ತು ಸಂದರ್ಭದಲ್ಲಿ ನಿಷ್ಕರ್ಮ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಆದರೆ, ಪಟ್ಟಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಚೇರಿ ಇಲ್ಲದೇ ತೊಂದರೆ ಅನುಭವಿಸುವಂತಾಗಿದೆ ಎಂದರು.

ಮಳೆಗಾಲದಲ್ಲಿ ವಾರದ ಕವಾಯತು ಹಾಗೂ ಸಭೆ ನಡೆಸಲು ಕಷ್ಟವಾಗಿದೆ. ಘಟಕದ ದಾಖಲೆಗಳು ಪೀಠೋಪಕರಣಗಳನ್ನು ಇಡಲು ಸಹ ತೊಂದರೆಯಾಗಿದೆ. ತಾಲೂಕು ಕೇಂದ್ರದಲ್ಲಿ ಲಭ್ಯವಿರುವ ಯಾವುದಾದರೂ ಸರ್ಕಾರಿ ಕಟ್ಟಡದಲ್ಲಿ ಸ್ಥಳಾವಕಾಶ ಕಲ್ಪಿಸಿಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಸಚಿವ ಎಸ್. ಮಧು ಬಂಗಾರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರದಲ್ಲಿ ಗೃಹರಕ್ಷಕ ದಳದವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗೃಹರಕ್ಷಕದಳದ ಪ್ಲೇಟೋನ್ ಲೀಡರ್ ಬಿ.ಎನ್. ಗೋಪಾಲ್, ಜರೀಕೋತಾ, ಸಿ.ಆರ್. ದುರ್ಗಪ್ಪ, ಎನ್.ಬಿ. ನಾಗರಾಜ್, ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago