ಸೊರಬ : ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಮಲೆನಾಡಿನ ಶ್ರದ್ಧಾಕೇಂದ್ರಗಳಲ್ಲಿ ಒಂದಾಗಿರುವ ಚಂದ್ರಗುತ್ತಿ ದೇವಾಲಯದಲ್ಲಿ ಕಳ್ಳತನದ ಯತ್ನ ನಡೆದಿದ್ದು, ದೇವಿಯ ಮೂರ್ತಿಯ ಮುಖವಾಡವನ್ನೆ ದುರುಳರು
ಕಿತ್ತೆಸೆಸಿದ್ದಾರೆ.
ದೇವಾಲಯ ಹಾಗೂ ಗರ್ಭಗುಡಿಯ ಬಾಗಿಲನ್ನು ಮುರಿದಿರುವ ಕಳ್ಳರು ರೇಣುಕಾ ದೇವಿಯ ಮೂರ್ತಿಯನ್ನು ಕಿತ್ತು ಬಿಸಾಡಿದ್ದಾರೆ. ಸದ್ಯ ದೊರೆತಿರುವ ಮಾಹಿತಿಯಂತೆ ದೇವಾಲಯದ ಹುಂಡಿಯನ್ನು ಕಳ್ಳರು ಒಡೆದಿಲ್ಲ.
ಇನ್ನು ಮೊನ್ನೆಯಷ್ಟೇ ಹುಣ್ಣಿಮೆಯಾಗಿದ್ದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡಿದ್ದರು. ಹೀಗಾಗಿ, ದೇವಾಲಯದಲ್ಲಿ ಅಧಿಕ ಕಾಣಿಕೆಗಳು ಸಲ್ಲಿಕೆಯಾಗಿರುತ್ತವೆ. ಇದನ್ನು ದೋಚುವ ಯತ್ನವೂ ಸಹ ಇದು ಆಗಿರಬಹುದು ಎನ್ನಲಾಗಿದೆ.ಪ್ರಮುಖವಾಗಿ, ದೇವಾಲಯದಲ್ಲಿ ಅತ್ಯಾಧುನಿಕ ಮೂಲ ಸೌಕರ್ಯಗಳು, ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಭದ್ರತಾ ವ್ಯವಸ್ಥೆಗಳು ಇಲ್ಲದ ಕಾರಣ ಇಂತಹ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಹುಸೇನ್ ಸರಕಾವತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಎಸ್ಐ, ದೇವಾಲಯ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…