ಸೊರಬ : ಚಂದ್ರಗುತ್ತಿ ಸಮೀಪದ ಅಂಕರವಳ್ಳಿ ಗ್ರಾಮದಲ್ಲಿ ಬಿರುಸಿನ ಗಾಳಿ-ಮಳೆಗೆ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ.
ಅಬ್ದುಲ್ ಖಾದರ್ ಎಂಬುವವರಿಗೆ ಸೇರಿದ ಗ್ರಾಮದ ಸರ್ವೆ ನಂ. 81 ರಲ್ಲಿನ ಸುಮಾರು 4 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಬಿರುಸಿನ ಗಾಳಿ ಮಳೆಗೆ ಧರೆಗೆ ಉರುಳಿದ್ದು, ಸುಮಾರು 5 ರಿಂದ 6 ಲಕ್ಷ ರೂ., ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ತೋಟದಲ್ಲಿ ಅಳವಡಿಸಿದ್ದ ಪೈಪ್ ಲೈನ್, ಸ್ಪ್ರಿಂಕ್ಲರ್ ಗಳು ಹಾಗೂ ಅಡಿಕೆ ಗಿಡಗಳಿಗೂ ಹಾನಿಯಾಗಿದ್ದು, ಸುಮಾರು 20ಕ್ಕೂ ಅಧಿಕ ಅಡಿಕೆ ಗಿಡಗಳು ಮುರಿದು ಬಿದ್ದಿವೆ.
ಸ್ಥಳಕ್ಕೆ ತೋಟಗಾರಿಕೆ ಇಲಾಖೆಯ ಅಧಿಕಾರಿ ಕೆ.ಆರ್. ದೊರೆರಾಜ್ ಹಾಗೂ ಕಂದಾಯ ಇಲಾಖೆಯ ಎಂ.ಎಸ್. ಯಶವಂತ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅಬ್ದುಲ್ ಖಾದರ್ ಅವರ ಪುತ್ರರಾದ ಎ.ಕೆ. ನಾಸೀರ್ ಹಾಗೂ ಎ.ಕೆ. ಖಾಲೀದ್, ಸಾಲ-ಸೊಲ ಮಾಡಿ ಬಾಳೆಯನ್ನು ಬೆಳೆಯಲಾಗಿತ್ತು. ಇನ್ನೊಂದು ತಿಂಗಳಿನಲ್ಲಿ ಫಸಲು ಕೈ ಸೇರುವ ನಿರೀಕ್ಷೆ ಇತ್ತು. ಆದರೆ, ಮಳೆ-ಗಾಳಿಯಿಂದ ಬಾಳೆ ತೋಟ ಸಂಪೂರ್ಣ ನಾಶವಾಗಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…