ಸೊರಬ: ಸಮೀಪದ ಬೆನ್ನೂರು ಗ್ರಾಮ ಪಂಚಾಯ್ತಿಯ ಎರಡನೇ ಅವಧಿಗೆ ಗುರುವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾದ ಶಿಲ್ಪಾ ರವಿ ಅಧ್ಯಕ್ಷರಾಗಿ ಹಾಗೂ ಮಂಜುನಾಥ ನಾಯ್ಕ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಎರಡನೇ ಅವಧಿಗೆ ಪ್ರಕಟವಾದ ಮೀಸಲಾತಿಯಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 9 ಸದಸ್ಯರ ಬಲವುಳ್ಳ ಪಂಚಾಯ್ತಿಯಲ್ಲಿ ಗ್ರಾಪಂ ಸದಸ್ಯೆ ಚಂದ್ರಕಲಾ ಸಲ್ಲಿಸಿದ ನಾಮಪತ್ರದಲ್ಲಿ ಸಮರ್ಪಕ ದಾಖಲಾತಿ ನೀಡಿಲ್ಲವೆಂದು ಚುನಾವಣಾಧಿಕಾರಿ ನಾಮಪತ್ರವನ್ನು ತಿರಸ್ಕರಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿಲ್ಪಾ ರವಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಂಜುನಾಥ್ ನಾಯ್ಕ್ ಅವರನ್ನು ಚುನಾವಣಾಧಿಕಾರಿಯಾದ ದಂಡಾವತಿ ಜಲಾನಯನ ಯೋಜನೆಯ ವಿಭಾಗದ ಸಹಾಯಕ ಅಭಿಯಂತರ ಸಂಪತ್ ಕುಮಾರ್ ಅವರು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಚಂದ್ರಗುತ್ತಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜು ಕೆಂಚಿಕೊಪ್ಪ, ಡಾ.ಎಚ್.ಇ. ಜ್ಞಾನೇಶ್, ಮುಖಂಡರಾದ ಈಶ್ವರ ಚನ್ನಪಟ್ಟಣ, ಗುರು ಕುಮಾರ್ ಪಾಟೀಲ್, ಪರಮೇಶ್ ಮಣ್ಣತ್ತಿ, ರಮೇಶ್ ಮಾವಿನಬಳ್ಳಿಕೊಪ್ಪ, ರಾಜು, ಚಂದ್ರು ನ್ಯಾಯ್ಕ್, ಗ್ರಾಪಂ ಸದಸ್ಯರಾದ ರಾಧಮ್ಮ, ಎಂ.ಕೆ ದೇವರಾಜ್, ಯಶೋಧ, ವಿನಾಯಕ್ ಎಸ್, ಈರಮ್ಮ, ಸಣ್ಣಪ್ಪ, ಚಂದ್ರಕಲಾ ಇತರರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…