ಸೊರಬ : ಮಲೆನಾಡಿನ ಅಪ್ಪಟ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಕೆರೆಬೇಟೆಯು ಸೊರಬ ಪುರಸಭೆ ವ್ಯಾಪ್ತಿಯ ಕೊಡಕಣಿ ಗ್ರಾಮದ ತಾವರೆಕೆರೆಯಲ್ಲಿ ಸಂಭ್ರಮದಿಂದ ನಡೆಯಿತು.
ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಕೆರೆಗಳನ್ನು ಹೊಂದಿರುವ ಹೆಗ್ಗಳಿಕೆ ಸೊರಬ ತಾಲೂಕಿನದ್ದಾಗಿದೆ. ಸುಮಾರು 1200 ಕೆರೆಗಳಿವೆ. ಅಂದ ಹಾಗೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕೆರೆಗಳು ಬತ್ತುತ್ತವೆ. ಈ ವೇಳೆಯೇ ರೈತರ ಜನಪದ ಕ್ರೀಡೆಯಾದ ಕೆರೆಬೇಟೆ ರಂಗೇರುತ್ತದೆ.
ಗ್ರಾಮದಲ್ಲಿ ಸುಮಾರು 500 ಮನೆಗಳಿದ್ದು, ಮನೆಗೆ ಎರಡು ಕೂಣಿ, ಒಂದು ಜರಡಿ ಬಲೆ ಬಳಸಿ ಮೀನು ಹಿಡಿಯಲು ಅವಕಾಶ ಒದಗಿಸಲಾಗಿತ್ತು.
ಗ್ರಾಮಸ್ಥರು ಮಾತ್ರವಲ್ಲದೇ ಹಳೇಸೊರಬ, ಹರಿಗೆ, ಕೋಡಿಹಳ್ಳಿ, ಅಂಡಿಗೆ, ಮಾವಲಿ ಸೇರಿದಂತೆ ವಿವಿಧ ಗ್ರಾಮಗಳಿಂದ ತಾಲೂಕಿನ ವಿವಿಧ ಭಾಗಗಳಿಂದ ಜನತೆ ಗ್ರಾಮೀಣ ಕ್ರೀಡೆ ಕೆರೆ ಬೇಟೆಯಲ್ಲಿ ಪಾಲ್ಗೊಂಡಿದ್ದರು.
ಈ ಬಗ್ಗೆ ಸುದ್ದಿಗಾರರ ಜೊತೆ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ಕೊಡಕಣಿ ಮಾತನಾಡಿ, ಮಲೆನಾಡು ಭಾಗದಲ್ಲಿ ಕೆರೆಬೇಟೆಗೆ ಮಹತ್ವವಿದೆ. ಪೂರ್ವಜರು ಆಚರಿಸಿಕೊಂಡು ಬಂದ ಹಬ್ಬವನ್ನು ಆಚರಿಸುತ್ತಿದ್ದೇವೆ. ಮಳೆಗಾಲದಲ್ಲಿ ಕೆರೆಗೆ ಮೀನುಗಳನ್ನು ಬಿಡಲಾಗಿತ್ತು. ಬೇಸಿಗೆಯಲ್ಲಿ ಕೆರೆಬೇಟೆ ಮಾಡಲಾಗುತ್ತದೆ. ಗ್ರಾಮಸ್ಥರು ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ ಎಂದರು.
ಇನ್ನು ಕೆರೆ ಬೇಟೆ ವೀಕ್ಷಿಸಿಲು ನೂರಾರು ಮಂದಿ ವಯಸ್ಸಿನ ಬೇಧವಿಲ್ಲದೆ ಆಗಮಿಸಿ ಸಂತಸಪಟ್ಟರು.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…