Categories: Soraba

ಶ್ರಾವಣ ಮಾಸದ ಪ್ರಯುಕ್ತ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರ

ಸೊರಬ: ಪುರಾಣ ಪ್ರಸಿದ್ಧ ಐತಿಹಾಸಿಕ ಶ್ರೀ ರೇಣುಕಾಂಬ ದೇಗುಲದಲ್ಲಿ ಗುರುವಾರದಂದು ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಪೂಜೆ ಪುನಸ್ಕಾರಗಳು ನಡೆದವು.

ದೇವಾಲಯದಲ್ಲಿ ಆಗಸ್ಟ್ 2 ರಂದು ದುಷ್ಕರ್ಮಿಗಳು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ವಿಫಲ ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನವಾದ ಗುರುವಾರದಂದು ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯ ನಿರ್ವಹಣಾ ಅಧಿಕಾರಿಗಳು ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಹಾಗೂ ಊರ ಗ್ರಾಮಸ್ಥರ ಸಮ್ಮುಖದಲ್ಲಿ ದೇವಾಲಯದಲ್ಲಿ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು, ಅಲ್ಲದೇ ಅಮ್ಮನವರಿಗೆ ಶಕ್ತಿ ತುಂಬುವ ರೂಪದಲ್ಲಿ ಇಲ್ಲಿನ ಯಾಗ ಶಾಲೆಯಲ್ಲಿ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹಾಗೂ ಕಲವೃಧ್ಧಿ, ನವಚಂಡಿ ಹೋಮ, ದೇವಿಯ ಪುನರ್ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. https://fb.watch/mtU6Vdt1oh/?mibextid=NnVzG8

ಮಂಕಿ ಅನಂತ್ ಭಟ್ ರಾಯ್ಕರ್, ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ್ ಭಟ್, ದೇವಾಲಯದ ತಾಂತ್ರಿಕರಾದ ಕೆಳದಿ ರಾಮ್ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಪುನಸ್ಕಾರಗಳು ನಡೆದವು.

ದೇವಾಲಯದಲ್ಲಿ ವಿಶೇಷ ತಳಿರು ತೋರಣ ಹಾಗೂ ಬಗೆ ಬಗೆಯ ಹೂವಿನ ಅಲಂಕಾರ ಮಾಡಲಾಗಿತ್ತು, ಬಂದಂತಹ ಭಕ್ತರಿಗೆ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ದೇವಿಯ ಹೆಸರಿನಲ್ಲಿ ಅನ್ನದಾಸೋಹ ಸೇವೆ ನಡೆಯಿತು.

“ಈ ಹಿಂದೆ ದೇವಾಲಯದಲ್ಲಿ ದುಷ್ಟರು ವಿಫಲ ಕಳ್ಳತನ ಪ್ರಯತ್ನ ನಡೆಸಿದ್ದು ಅಲ್ಲದೇ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ಮೂರ್ತಿಯ ಬೆಳ್ಳಿ ಮುಖ ವಿರೂಪಗಳಿಸಿದ್ದರು. ಧಾರ್ಮಿಕ ಸಂಪ್ರದಾಯದಂತೆ ನಾಡಿನ ಸಮಸ್ತ ಭಕ್ತರ ಒಳಿತಿಗಾಗಿ ನವಗ್ರಹ ಪೂರ್ವಕ ಸಂಪ್ರೋಕ್ಷಣೆ, ವಿಶೇಷ ಹೋಮ, ಹವನಗಳನ್ನು ದೇಗುಲದಲ್ಲಿ ನಡೆಸಿದ್ದೇವೆ.”
– ವಿ.ಎಲ್ ಶಿವಪ್ರಸಾದ್ ದೇವಸ್ಥಾನ ಕಾರ್ಯ ನಿರ್ವಹಣಾ ಅಧಿಕಾರಿ

    ಸೊರಬ ತಾಲೂಕು ದಂಡಾಧಿಕಾರಿಗಳಾದ ಹುಸೇನ್ ಸರಕಾವಸ್, ದೇವಸ್ಥಾನ ಕಾರ್ಯ ನಿರ್ವಹಣಾ ಅಧಿಕಾರಿ ವಿ.ಎಲ್ ಶಿವಪ್ರಸಾದ್, ದೇವಾಲಯ ಅಧ್ಯಕ್ಷ ಪ್ರಸನ್ನ ಶೇಟ್, ಮಾಜಿ ತಾ.ಪಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹೆಚ್. ಗಣಪತಿ ಹುಲ್ತಿಕೊಪ್ಪ, ಗ್ರಾಂ.ಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ರೇಣುಕಾ ಪ್ರಸಾದ್, ಸದಸ್ಯರಾದ ರತ್ನಾಕರ್ ಎಂ.ಪಿ, ತಾ.ಪಂ ಮಾಜಿ ಸದಸ್ಯ ನಾಗರಾಜ್ ಎನ್.ಜಿ, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ.ಶೃತಿ ಸೇರಿದಂತೆ ಊರಿನ ಗ್ರಾಮಸ್ಥರು ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

    Malnad Times

    Recent Posts

    ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

    ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

    9 hours ago

    ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

    ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

    13 hours ago

    CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

    ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

    14 hours ago

    ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

    ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

    16 hours ago

    ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

    ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

    16 hours ago

    ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

    ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

    23 hours ago