Categories: Soraba

ಸಂಭ್ರಮದಿಂದ ನಡೆದ ರೋಮಾಂಚನಕಾರಿ ಹೋರಿ ಬೆದರಿಸುವ ಹಬ್ಬ

ಸೊರಬ: ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಶ್ರೀ ಅವಳಂಬಿಕ ಯುವಕ ಸಂಘ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಏರ್ಪಡಿಸಿದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವು ಸಾವಿರಾರು ಅಭಿಮಾನಿಗಳ ಹರ್ಷೋದ್ಗಾರದ ಮಧ್ಯೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ರೋಮಾಂಚನಕಾರಿ ಹೋರಿ ಹಬ್ಬವನ್ನು ಕಣ್ತುಂಬಿಕೊಳ್ಳಲು ತಾಲೂಕು ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಹೋರಿ ಪ್ರಿಯರು ಜಮಾಯಿಸಿದ್ದರು. ಗ್ರಾಮೀಣ ಪ್ರದೇಶದಲ್ಲಿ ಹೋರಿ ಬೆದರಿಸುವ ಹಬ್ಬಕ್ಕೆ ಮಹತ್ವವಿದ್ದು, ಹೋರಿ ಮಾಲೀಕರು ಹೋರಿಗಳಿಗೆ ಬಗೆಬಗೆಯ ಜೂಲಾ, ಬಲೂನ್, ರಿಬ್ಬನ್, ಒಣಕೊಬ್ಬರಿ, ಮತ್ತು ಕಾಲ್ಗೆಜ್ಜೆ ಕಟ್ಟಿ ಕಂಗೊಳಿಸುವಂತೆ ಸಿಂಗರಿಸಿದ್ದರು,

ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು‌. ಯುವಕರು ಹೋರಿಗಳ ಹೆಸರಿನ ಧ್ವಜವನ್ನು ಹಿಡಿದು ಅಂಕಣದ ಸುತ್ತಲು ಸಂಭ್ರಮದಿಂದ ಕುಣಿಯುತ್ತ ಓಡಾಡುತ್ತಿದ್ದರು. ಪ್ರವೇಶ ದ್ವಾರದಿಂದ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಹೂವು, ಬಣ್ಣ ಬಣ್ಣದ ಶಾಟ್ಸ್ ಗಳನ್ನು ಹಾರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು. ತೇರಿನಂತೆ ಕಾಣುವ ಪೀಪಿ ಹೋರಿ ಅಖಾಡದಲ್ಲಿ ಇಳಿಯುತ್ತಿದಂತೆ ಇತ್ತ ಹೋರಿ ಅಭಿಮಾನಿಗಳಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿ ಕೇಳಿ ಬರುತ್ತಿದ್ದವು,

ಅಖಾಡದಲ್ಲಿ ಚಿಕ್ಕಾವಲಿ ನಾಗ, ಶಿಗ್ಗಾದ ಕ್ರೇಜಿಸ್ಟಾರ್, ಮರೂರು ತಾರಕಾಸುರ, ಜಕನಹಳ್ಳಿ ಮುತ್ತು, ಮಲೆನಾಡ ಮಹಾರಾಜ, ತಿಮ್ಮಲಾಪುರ ಜಂಪಿಂಗ್ ಸ್ಟಾರ್, ಕುಪ್ಪಗಡ್ಡೆಯ ರಾವಣ, ಎಳಗೇರಿ ಉಡಾಳ, ಹರಿಗಿ ಗ್ಯಾಂಗ್ ಸ್ಟಾರ್, ಚಿಕ್ಕೋಟಿ ಗ್ಯಾಂಗ್ ಸ್ಟಾರ್, ಹಾತನ್ಕಟ್ಟೆ ಕಾ ನಾಯಕ, ಕರ್ನಾಟಕ ಕಿಂಗ್, ಗೇರ್ಕೊಪ್ಪ ಪ್ರಳಯಾಂತಕ, ಇಂಡೊಳ್ಳಿ ಕರ್ಣ ಸೇರಿದಂತೆ ಜನಪದ ಸಂಸ್ಕೃತಿಯ ಪ್ರತೀಕವಾದ ಹಬ್ಬದಲ್ಲಿ 300ಕ್ಕೂ ಹೆಚ್ಚಿನ ವಿವಿಧ ಹೆಸರಿನ ಹೋರಿಗಳು ಅಖಾಡದಲ್ಲಿ ಓಡಿದವು.

ಹೋರಿ ಹಬ್ಬ ಆಯೋಜಿಸಿದ ಶಿಗ್ಗಾ ಗ್ರಾಮದ ಶ್ರೀ ಅವಳಂಬಿಕ ಯುವಕ ಸಂಘದವರು ಅಖಾಡದಲ್ಲಿ ಸುರಕ್ಷಿತವಾದ ಕ್ರಮ ಕೈಗೊಂಡು‌‌. ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದರು. ಉತ್ತಮವಾಗಿ ಓಡಿದ ಹೋರಿಗಳನ್ನು ಮತ್ತು ಬಲಪ್ರದರ್ಶಿಸಿದ ಪೈಲ್ವಾನರನ್ನು ಗುರುತಿಸಲಾಯಿತು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

4 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

9 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

18 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago