Categories: Soraba

ಸಡಗರ ಸಂಭ್ರಮದಿಂದ ನೆರವೇರಿದ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ

ಸೊರಬ: ತಾಲೂಕಿನ ಶಾಂತಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಯುವಕ ಸಂಘ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಏರ್ಪಡಿಸಿದ್ದ ಜನಪದ ಕ್ರೀಡೆ ಸಾಂಪ್ರಾದಾಯಿಕ ಹೋರಿ ಬೆದರಿಸುವ ಹಬ್ಬ ಸಡಗರ ಸಂಭ್ರಮದಿಂದ ಬುಧವಾರ ನಡೆಯಿತು.


ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಹಬ್ಬಕ್ಕೆ ಮಹತ್ವವಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ಸಾವಿರಾರು ಪ್ರೇಕ್ಷಕರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾರ ಕೈಗೆ ಸಿಲುಕದಂತೆ ಹೋರಿಗಳು ಓಡುವ ದೃಶ್ಯ ನೋಡುಗರ ಮೈನವಿರೇಳಿಸಿತು. ಹೋರಿ ಮಾಲಿಕರು ತಮ್ಮ ನೆಚ್ಚಿನ ಹೋರಿಗಳನ್ನು ಬಗೆಬಗೆಯ ಜೂಲ, ಬಲೂನ್, ರಿಬ್ಬನ್, ಒಣಕೊಬ್ಬರಿ ಕಟ್ಟಿ ಸಿಂಗರಿಸಿದ್ದರು. ತೇರಿನಂತೆ ಸಿಂಗಾರಗೊಂಡ ಪೀಪಿ ಹೋರಿಗಳು ಅಖಾಡದಲ್ಲಿ ಓಡಿ ಬರುತ್ತಿದ್ದಂತೆ ಪ್ರೇಕ್ಷಕರ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿ ಬಂದಿತು. ಪೈಲ್ವಾನರು ಹೋರಿಗಳನ್ನು ಹಿಡಿದು ಬಲ ಪ್ರದರ್ಶನ ಮಾಡಿದರು.


ಕರೆಕ್ಯಾತನಹಳ್ಳಿ ಯಜಮಾನ, ಹರೂರು ಗೂಳಿ, ಉದ್ರಿ ಡಾನ್, ಮನ್ಮನೆಯ ಅಧೀರ, ಯಲವಳ್ಳಿಯ ಗೂಳಿ, ಕೊಲೆಗಾರ, ತಾಳಗುಂದ ಅರ್ಜುನ, ಕೊಡಕಣಿ ಕದಂಬ, ಕೊಡಕಣಿ ರಾಯನ್, ಶಾಂತಗೇರಿ ಡೇಜರ್ ಮುತ್ತು, ಬನವಾಸಿಯ ಕದಂಬ, ಶಿಕಾರಿಪುರ ಹೋಯ್ಸಳ, ಕಡೆನಂದಿಹಳ್ಳಿ ನಾಯಕರ ಹುಲಿ, ತಾವರೆಕೊಪ್ಪದ ಪೈಲ್ವಾನ, ಶಿಗ್ಗಾದ ಮೆಜೆಸ್ಟಿಕ್ ಹುಲಿ, ಅಂಡಿಗೆ ಆರ್‌ಎಂಡಿ ಕಿಂಗ್, ಶಿಕಾರಿಪುರ ವಾರಸ್ದಾರ, ಗದ್ದೆಮನೆ ಹುಲಿ, ಚಂದ್ರಗುತ್ತಿಯ ಚಂದ್ರಗುತ್ಯಮ್ಮ ಮತ್ತು ಬೆಳ್ಳಿ ಕುದುರೆ ಸೇರಿದಂತೆ ಜನಪದ ಸಂಸ್ಕೃತಿಯ ಪ್ರತೀಕವಾದ ಹಬ್ಬದಲ್ಲಿ ಸುಮಾರು ಎರಡನೂರು ವಿವಿಧ ಹೆಸರಿನ ಹೋರಿಗಳು ಅಕಾಡದಲ್ಲಿ ಓಡಿದವು.


ಸಮಿತಿಯ ವತಿಯಿಂದ ಸುರಕ್ಷತೆ ಹೆಚ್ಚಿನ ಗಮನ ನೀಡಲಾಗಿತ್ತು. ಅಖಾಡದ ಎರಡು ಬದಿಯಲ್ಲಿ ಬೇಲಿಯನ್ನು ನಿರ್ಮಿಸಲಾಗಿತ್ತು. ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಲಾಯಿತು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಮತ್ತು ಬಲ ಪ್ರದರ್ಶನ ಮಾಡಿದ ಪೈಲ್ವಾನರನ್ನು ಗುರುತಿಸಲಾಯಿತು.

Malnad Times

Recent Posts

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

39 mins ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

2 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

4 hours ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

4 hours ago

Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…

10 hours ago

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

21 hours ago