Categories: Soraba

ಸೊರಬ ಕ್ಷೇತ್ರದಲ್ಲಿ ಜನ ಜಾಗೃತಿ‌ ಪಾದಯಾತ್ರೆ ; ಜೆಡಿಎಸ್ ಸೊರಬ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಬಾಸೂರು ಚಂದ್ರೇಗೌಡ ನೇತೃತ್ವ

ಸೊರಬ : ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನೀಡಿದ ಜನಪರ ಯೋಜನೆಗಳನ್ನು ಜನತೆ ಇಂದಿಗೂ ಸ್ಮರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಜೆಡಿಎಸ್ ಪಕ್ಷವನ್ನು ಜನತೆ ಕೈ ಹಿಡಿಯಲಿದ್ದಾರೆ ಎಂದು ಜೆಡಿಎಸ್ ಸೊರಬ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಹೇಳಿದರು.

ಸೊರಬ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ತಟ್ಟೆಗುಂಡಿ ಗ್ರಾಮದ ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಬುಧವಾರ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಪಾದಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಜನತೆ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಂಜುಂಡಪ್ಪ ವರದಿಯಂತೆ ಕ್ಷೇತ್ರ ಇಂದಿಗೂ ಸಹ ಹಿಂದುಳಿದ ತಾಲೂಕಾಗಿದ್ದು, ಆಸ್ಪತ್ರೆ, ಶಿಕ್ಷಣ, ಉದ್ಯೋಗ, ಶಾಶ್ವತ ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಾಲೂಕು ಹಿಂದುಳಿದಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ರೈತರು ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿದಾಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರ ಸ್ವಾಮಿಯವರು ರೈತರ ಸುಮಾರು 26ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ಕುಮಾರ ಸ್ವಾಮಿಯವರ ಆಡಳಿತವನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ಕಾಲ ಎನ್ನಬಹುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರದಲಿದೆ. ಕುಮಾರ ಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದ ಅವರು, ತಾವು ಕಳೆದ ಫೆ.6ರಿಂದ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಜನತೆಯಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸೊರಬದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎನ್. ಕುಮಾರ್ ಮಾತನಾಡಿ, ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಠಿ, ಪ್ರತಿ ಹೋಬಳಿಯಲ್ಲಿ ಸುಸಜ್ಜಿತ ಆಸ್ಪತ್ರೆ ಮತ್ತು ಉತ್ತಮ ಶಾಲೆ ಸೇರಿದಂತೆ ರೈತರಿಗೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಕುಮಾರ ಸ್ವಾಮಿಯವರು ಈಗಾಗಲೇ ರೂಪಿಸಿಕೊಂಡಿದ್ದು, ಜೆಡಿಎಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಅವುಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

ಸಾಗರ ತಾಲೂಕು ಜೆಡಿಎಸ್ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ, ತಾಳಗುಪ್ಪ ಹೋಬಳಿ ಅಧ್ಯಕ್ಷ ಮನೋಹರ ಕುಗ್ವಿ, ಸೊರಬ ತಾಲೂಕು ಜೆಡಿಎಸ್ ಉಪಾಧ್ಯಕ್ಷ ಹನುಮಂತಪ್ಪ, ಅಲ್ಪ ಸಂಖ್ಯಾತ ತಾಲೂಕು ಘಟಕದ ಅಧ್ಯಕ್ಷ ಅಜೀಜ್ ಸಾಹೇಬ್, ಸೊರಬ ಟೌನ್ ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಆರ್. ಕುಮಾರ್, ಮುಖ್ಯಂಡರಾದ ಮೈಲಪ್ಪ, ಅಶೋಕ್ ಪಾಟೀಲ್, ವೀರಭದ್ರಪ್ಪ ಉಳವಿ, ಗಣಪತಿ ಮಂಜಿನಖಾನ್, ದತ್ತೇಶ ಕಾಗೋಡು, ರವಿ ಮತ್ತೂರು, ಸಂಪತ್ ಕುಮಾರ್, ಎಂ.ಐ.ಕೆ. ಸಾಹೇಬ್ ಸಾಗರ, ಸಂತೋಷ್ ಬಾಸೂರು, ಕಿರಣ್ ಬಾಸೂರು, ಇಸ್ಮಾಯಿಲ್ ಸೇರಿದಂತೆ ಇತರರಿದ್ದರು.

Malnad Times

Recent Posts

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

26 mins ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

2 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

13 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

14 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

15 hours ago