Categories: Soraba

Soraba | Kumar Bangarappa | ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದವರಿಂದಲೇ ಕೊತಕೊತ


ಸೊರಬ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನವಿರೋಧಿಯಾಗಿರುವ ಕ್ಷೇತ್ರದಿಂದ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿದರೆ, ನಮೋ ವೇದಿಕೆಯಿಂದ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು ಎಂದು ಬಿಜೆಪಿ ಹಿರಿಯ ಧುರೀಣ ಪದ್ಮನಾಭ್ ಭಟ್ ಬಿಜೆಪಿ ಪಕ್ಷಕ್ಕೆ ಸಂದೇಶ ರವಾನಿಸಿದ್ದಾರೆ.


ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಮೋ ವೇದಿಕೆಯಿಂದ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ಬೈಕ್ ರ್‍ಯಾಲಿಗೆ ಚಾಲನೆ ನೀಡಿ, ನಂತರ ಸೊರಬ ಸರ್ಕಲ್‌ನಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿ, ಹತ್ತು ವರ್ಷಗಳಿಂದ ಅಧಿಕಾರ ವಂಚಿತನಾಗಿ ಮನೆಯಲ್ಲಿ ಕುಳಿತಿದ್ದ ಕುಮಾರ್ ಬಂಗಾರಪ್ಪ ಅವರಿಗೆ ಪಕ್ಷಕ್ಕೆ ಕರೆತಂದು, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹಗಲಿರುಳು ಶ್ರಮಿಸಿದ್ದರ ಪರಿಣಾಮ ಶಾಸಕರಾದರು. ಕಾರ್ಯಕರ್ತರ ಮೇಲೆ ಕನಿಷ್ಟ ಕೃತಜ್ಞತಾ ಮನೋಭಾವವೂ ಇಲ್ಲದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಜನವಿರೋಧಿ, ರೈತ ವಿರೋಧಿ, ಪಕ್ಷ ವಿರೋಧಿಯಾಗಿರುವ ಕುಮಾರ್ ಬಂಗಾರಪ್ಪ ಅವರಿಗೆ ಪಕ್ಷದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೇಟ್ ನೀಡಬಾರದು ಎಂಬ ಗಟ್ಟಿ ಧ್ವನಿಯೊಂದಿಗೆ ಪಕ್ಷದ ಸ್ವಾಭಿಮಾನಿ ಕಾರ್ಯಕರ್ತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪಕ್ಷದ ವರಿಷ್ಠರು ಇದನ್ನು ಗಮನಿಸಬೇಕು. ಕುಮಾರ್ ಅವರಿಗೆ ಟಿಕೆಟ್ ನೀಡಿದರೆ ನಮೋ ವೇದಿಕೆಯಿಂದ ಸಾಮಾನ್ಯ ಕಾರ್ಯಕರ್ತನೊಬ್ಬ ಅಖಾಡಕ್ಕೆ ಇಳಿಯಲಿದ್ದಾರೆ. ಜೊತೆಗೆ ಗೆಲುವನ್ನು ಸಾಧಿಸಲಿದ್ದೇವೆ ಎಂದು ವಿಶ್ವಾಸದೊಂದಿಗೆ ಘೋಷಣೆ ಮಾಡಿದರು.


ಹಾದಿಬೀದಿಯಲ್ಲಿ ಅಶ್ವಮೇಧ ಹಾಡು ಹೇಳಿದ್ದೇ ಸಾಧನೆ :
ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರ್ಪಡೆಗೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಎಂಬ ನಾಮಬಲದಿಂದಲೇ ಗೆಲುವು ಸಾಧಿಸಿದ್ದು, ಯಾವುದೇ ರಾಜಕೀಯ ಜ್ಞಾನವಿಲ್ಲದ, ಹೋರಾಟದ ಹಿನ್ನೆಲೆ ಇಲ್ಲದ ಕುಮಾರ್ ಅವರಿಗೆ ವೇದಿಕೆ ಕಲ್ಪಿಸಿದರು. ಚಿತ್ರನಟ ಎಂಬ ಸ್ಟಾರ್ ಪಟ್ಟವಿತ್ತು. ಜನ ಸೇರಿದಲ್ಲೆಲ್ಲಾ ಹಾದಿ ಬೀದಿಯಲ್ಲಿ ಅಶ್ವಮೇಧ ಚಿತ್ರದ ಹಾಡೊಂದನ್ನು ಹಾಡಿ ಜನರನ್ನು ಮರಳು ಮಾಡಿದ್ದೇ ಕುಮಾರ್ ಸಾಧನೆ. ಆದರೆ, ಬಡವರ ಪರ ಕಾಳಜಿ ಇಲ್ಲದೆ ವರ್ತಿಸುತ್ತಿದ್ದಾರೆ. ತಾಳಗುಪ್ಪದಲ್ಲಿ ರೈತರನ್ನು ಬೀದಿ ಪಾಲು ಮಾಡಲಾಗಿದೆ. ಅವರ ಸರ್ವಾಧಿಕಾರಿ ಧೋರಣೆಗೆ ಪೂರ್ಣವಿರಾಮ ನೀಡುವುದೇ ನಮೋ ವೇದಿಕೆ ಮೂಲ ಧ್ಯೇಯವಾಗಿದೆ. ನಮೋ ವೇದಿಕೆಯವರು ಬಿಜೆಪಿಯ ವಿರೋಧಿಗಳಲ್ಲ. ಪಕ್ಷದಲ್ಲಿ ಜನಸಂಘ ಕಾಲದಿಂದಲೂ ದುಡಿದವರು ಇದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳ ಕನಿಷ್ಟ ಅರಿವಿಲ್ಲದಿರುವ ಕುಮಾರ್ ಅವರಿಂದ ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ನೋವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದಲೂ ಹೋರಾಟ ಮಾಡುತ್ತಲೇ ಇದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲ ಎಂದು ಸ್ಪಷ್ಟಪಡಿಸಿದರು.


ಕಮಿಷನ್‌ಗಾಗಿ ಕ್ಷೇತ್ರದಲ್ಲಿ ಉಳಿದ ಶಾಸಕ:
ರ್‍ಯಾಲಿಯ ಅಧ್ಯಕ್ಷತೆ ವಹಿಸಿದ್ದ ನಮೋ ವೇದಿಕೆಯ ತಾಲೂಕು ಅಧ್ಯಕ್ಷ ಪಾಣಿ ರಾಜಪ್ಪ ಮಾತನಾಡಿ, ಬಿಜೆಪಿಯ ಜನ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ನಡೆಯುತ್ತಿದ್ದು, ನರೇಂದ್ರ ಮೋದಿಯವರು ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಕಾರ್ಯಕರ್ತರನ್ನು ಕರೆದುಕೊಂಡು ಹುಮ್ಮಸ್ಸಿನಿಂದ ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಸ್ಥಳೀಯ ಶಾಸಕ ಕುಮಾರ್ ಬಂಗಾರಪ್ಪ ಕಮಿಷನ್ ಆಸೆಗಾಗಿ ಕ್ಷೇತ್ರದಲ್ಲಿಯೇ ಉಳಿದುಕೊಂಡು ಅಪೂರ್ಣ ಕಾಮಗಾರಿಗಳ ಉದ್ಘಾಟನೆ-ಶಂಕುಸ್ಥಾಪನೆಯಲ್ಲಿ ನಿರತರಾಗಿರುವುದು ಅವರ ಕಾರ್ಯವೈಖರಿ ಎತ್ತಿ ತೋರುತ್ತದೆ. ನಮೋ ವೇದಿಕೆಯ ಕಾರ್ಯಕರ್ತರು ದಾವಣಗೆರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದೇ ಇರಬಹುದು. ಆದರೆ, ಆನವಟ್ಟಿ ಬೈಕ್ ರ್‍ಯಾಲಿಯು ಪೂರ್ವ ನಿಯೋಜಿತ ಕಾರ್ಯಕ್ರಮವಾಗಿತ್ತು. ಶಿವಮೊಗ್ಗದಲ್ಲಿ ನಡೆದ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಅರವತ್ತು ಬಸ್‌ಗಳಲ್ಲಿ ನಮೋ ವೇದಿಕೆಯ ಕಾರ್ಯಕರ್ತರು ತೆರಳಿದ್ದರು. ನಮೋ ವೇದಿಕೆಯವರ ಮೂಲ ಉದ್ದೇಶವೊಂದೆ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರಿಗೆ ಟಿಕೇಟ್ ನೀಡಬಾರದು. ಪಕ್ಷದಿಂದ ಬೇರೆ ಯಾವುದೇ ಅಭ್ಯರ್ಥಿಯನ್ನು ಸೂಚಿಸಿದರೆ ಒಗ್ಗಟ್ಟಿನಿಂದ ದುಡಿಯಲಿದ್ದೇವೆ ಎಂದರು.


ಇದಕ್ಕೂ ಮೊದಲು ಕೋಟಿಪುರದ ಶ್ರೀ ಕೈಠಭೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆಯೊಂದಿಗೆ ಆರಂಭವಾದ ಬೈಕ್ ರ್‍ಯಾಲಿಯು ಆನವಟ್ಟಿ ಪಟ್ಟಣದ ಮುಖ್ಯರಸ್ತೆಯಲ್ಲಿ ಸಂಚರಿಸಿತು. ರ್‍ಯಾಲಿಯುದ್ದಕ್ಕೂ ಕುಮಾರ್ ಹಟಾವೋ.. ಬಿಜೆಪಿ ಬಚಾವೋ ಘೋಷಣೆಗಳು ಮೊಳಗಿದವು. ರ್‍ಯಾಲಿಗೆ ಡೊಳ್ಳು, ಡಿಜೆ ಸೇರಿದಂತೆ ವಿವಿಧ ಕಲಾತಂಡಗಳು ಮೆರಗು ತಂದವು.
ನಮೋ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ಮಂಜಪ್ಪ ನೇರಲಗಿ, ವಿಜೇಂದ್ರಗೌಡ ತೆಲಗುಂದ, ಅರುಣ್ ಕುಮಾರ್ ಪುಟ್ಟನಹಳ್ಳಿ, ಸಂಘಟನಾ ಕಾರ್ಯದರ್ಶಿ ದಿವಾಕರ ಭಟ್ ಭಾವೆ, ಪ್ರಮುಖರಾದ ಎ.ಎಲ್. ಅರವಿಂದ್, ಗುರುಪ್ರಸನ್ನಗೌಡ ಬಾಸೂರು, ನಿರಂಜನ ಕುಪ್ಪಗಡ್ಡೆ, ಅಶೋಕ್ ನಾಯ್ಕ್ ಅಂಡಿಗೆ, ಯೋಗೇಶ್ ವಕೀಲ, ಡಿ. ಶಿವಯೋಗಿ, ರಾಜಶೇಖರ ಗಾಳಿಪುರ, ಮಲ್ಲಿಕಾರ್ಜುನ ಗುತ್ತೇರ್, ಬಸವರಾಜ ಬಾರಂಗಿ, ಸಂಜೀವ್ ಆಚಾರ್, ರವಿ ಗುಡಿಗಾರ್, ಶ್ರೀಧರ್ ಭಂಡಾರಿ, ಪರಮೇಶ್, ಸೇರಿದಂತೆ ಸುಮಾರು ಆರು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ತಾಲೂಕಿನ ವಿವಿಧ ಭಾಗಗಳಿಂದ ಪಾಲ್ಗೊಂಡಿದ್ದರು.

ನಮೋ ವೇದಿಕೆ ಬಿಜೆಪಿಯ ’ಎ’ ಟೀಮ್
ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ತಂಡವೇ ನಮೋ ವೇದಿಕೆ. ಆದರೆ, ಇತ್ತೀಚೆಗೆ ಶಾಸಕ ಕುಮಾರ್ ಬಂಗಾರಪ್ಪ ಬೆಂಬಲಿಗನೊಬ್ಬ ನಮೋ ವೇದಿಕೆಯನ್ನು ಕಾಂಗ್ರೆಸ್‌ನ ಬಿ ಟೀಮ್ ಎಂದು ಆರೋಪಿಸಿದ್ದರು. ಪಕ್ಷದಲ್ಲಿ ಮಾನ್ಯತೆಯೇ ಇಲ್ಲದ ವ್ಯಕ್ತಿಗೆ ಪ್ರತಿಕ್ರಿಯೆ ನೀಡಬಾರದಿತ್ತು. ಆದರೆ, ನಮೋ ವೇದಿಕೆಯು ಪ್ರಾಮಾಣಿಕ, ಸ್ವಾಭಿಮಾನಿ ಕಾರ್ಯಕರ್ತರ ಬಿಜೆಪಿಯ ಎ ಟೀಮ್ ಆಗಿದೆ ಎಂದು ನಮೋ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ತಿರುಗೇಟು ನೀಡಿದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

4 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

4 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

4 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

5 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

7 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

10 hours ago