Thirthahalli | ಅರಳಸುರಳಿಯಲ್ಲಿ‌ ಮೂವರ ಸಜೀವ ದಹನ ಪ್ರಕರಣ ; ಎರಡ್ಮೂರು ಕ್ಲೂ ಸಿಕ್ಕಿದೆ – ಎಸ್‌ಪಿ

ತೀರ್ಥಹಳ್ಳಿ : ಅರಳಸುರಳಿಯಲ್ಲಿ ಕೇಕುಡ ಕುಟುಂಬದ ಮೂವರ ಸಜೀವ ದಹನ ಘಟನೆ ಸಂಬಂಧ ಎಸ್‌ಪಿ ಮಿಥುನ್ ‌ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮನೆಯ ಕೋಣೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ದೇಹಗಳು ಪತ್ತೆಯಾಗಿದೆ. ಘಟನೆ ನಡೆದ ಅರ್ಧಗಂಟೆಯೊಳಗೆ ತೀರ್ಥಹಳ್ಳಿಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದಾರೆ.

ರಾಘವೇಂದ್ರ, ನಾಗರತ್ನ, ಶ್ರೀರಾಮ ಮೃತಪಟ್ಟಿದ್ದಾರೆ. ಈ ಘಟನೆಯ ಎರಡ್ಮೂರು‌ ಕ್ಲೂ ಸಿಕ್ಕಿದೆ. ತನಿಖೆ ಮುಂದುವರಿದಿದೆ ಎಂದರು.

ದಾವಣಗೆರೆಯಿಂದ ಪೋರೆನ್ಸಿಕ್ ತಜ್ಞರ ತಂಡ, ಸೀನ್ ಆಫ್ ಕ್ರೈಂ ಆಫೀಸರ್ಸ್ ತಂಡ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿದೆ‌. ತನಿಖೆ ‌ನಂತರ ಏಕೆ ಆಗಿದೆ ಅಂತಾ ಗೊತ್ತಾಗಲಿದೆ. ಮನೆಯ‌ ಒಂದು ರೂಂ ನಲ್ಲಿ ಈ ಘಟನೆ ನಡೆದಿದ್ದು ಮೂರು ಬಾಡಿಗಳು ಒಂದರ ಮೇಲೊಂದು ಬಿದ್ದಿದೆ‌. ಮನೆಯ‌ ಒಳಗಡೆ ಕೆಲವು ಅಂಶ ಪತ್ತೆಯಾಗಿದೆ‌.

ಘಟನೆಯಲ್ಲಿ ಗಾಯಗೊಂಡ ಭರತಗೆ ಶೇ. 40 ರಿಂದ 50ರಷ್ಟು ಸುಟ್ಟ ಗಾಯಗಳಾಗಿದೆ. ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ‌. ಗಾಯಗೊಂಡಿರುವ ಭರತ್ ಹೇಳಿಕೆ ಪಡೆದು ತನಿಖೆ ನಡೆಸಲಾಗುವುದು‌. ತನಿಖೆ ಬಳಿಕ ಹೆಚ್ಚಿನ ವಿಚಾರ ಹೊರ ಬರಲಿದೆ. ತನಿಖೆಯಾಗದೇ ಏನು‌ ಹೇಳಲು ಬರುವುದಿಲ್ಲ ಎಂದರು.

Malnad Times

Recent Posts

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

14 mins ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

43 mins ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

7 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

18 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

24 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago