ತುಂಗಾ ನದಿಯಲ್ಲಿ ಈಜಲು ಹೋದ ಬಾಲಕ ನೀರುಪಾಲು !

0 76

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಬುಧವಾರ ಸಂಜೆ ವೇಳೆ ನಡೆದಿದೆ.

ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಪ್ರಮೋದ್ ಪೂಜಾರಿ ಅವರು ನೀರಿನಲ್ಲಿ ಹುಡುಕಿ ಮೃತದೇಹವನ್ನು ಹೊರತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!