ಲಾರಿಯಲ್ಲೇ ಕೊಳೆತ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ !

0 90

ತೀರ್ಥಹಳ್ಳಿ: ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ಈತನ ಮೃತ ದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಹುಬ್ಬಳ್ಳಿಯ ಮಲ್ಲಿಕಾರ್ಜುನ ಎಂಬವರು ಬುಧವಾರದಂದು ಮನೆ ಮಾಡಿಗೆ ಹೊದಿಸುವ ಶೀಟ್ ಗಳನ್ನು ಲಾರಿಯಲ್ಲಿ ತೀರ್ಥಹಳ್ಳಿಗೆ ತಂದಿದ್ದರು. ಇದನ್ನು ಅನ್ ಲೋಡ್ ಮಾಡಿದ ಬಳಿಕ ಲಾರಿ ಬಾಗಿಲು ಹಾಕಿಕೊಂಡು ಮಲಗಿಕೊಂಡಿದ್ದರು.

ಈ ವೇಳೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿದ್ದು, ಶನಿವಾರದಂದು ಲಾರಿಯಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಪರಿಶೀಲಿಸಿದ ವೇಳೆ ಮಲ್ಲಿಕಾರ್ಜುನ ಅವರ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.

error: Content is protected !!