ತೀರ್ಥಹಳ್ಳಿ : ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ತೀರ್ಥಹಳ್ಳಿ ಕ್ಷೇತ್ರ ಈ ಭಾರಿ ರೋಚಕತೆಯಿಂದ ಕೂಡಿರಲಿದೆ. ಪ್ರತಿ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮದ್ಯೆ ಪೈಪೋಟಿ ಸಾಮಾನ್ಯವಾಗಿದ್ದು ಈ ಬಾರಿ ಮತ್ತಷ್ಟು ರೋಚಕತೆಯಿಂದ ಇರಬಹುದು ಎಂದು ಅಂದಾಜಿಸಲಾಗುತ್ತಿದೆ.
ಕಿಮ್ಮನೆ ರತ್ನಾಕರ್ ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಆರ್.ಎಂ ಮಂಜುನಾಥ ಗೌಡರು ತಮ್ಮ ಬೆಂಬಲಿಗರೊಂದಿಗೆ ಆಯನೂರು ಸಮೀಪದ ಕರಕೂಚಿ ಮತ್ತು ತಮ್ಮ ತೀರ್ಥಹಳ್ಳಿ ಬೆಟ್ಟಮಕ್ಕಿ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ಕಾರಣ ಬಂಡಾಯ ಎಳುತ್ತಾರೆ ಎಂಬ ಮಾತು ಸಾರ್ವಜನಿಕವಾಗಿ ಕಾರ್ಯಕರ್ತರಲ್ಲಿ ಚರ್ಚೆಯಲ್ಲಿತ್ತು. ಆದರೆ ಕಿಮ್ಮನೆ ರತ್ನಾಕರ್ ಅವರೇ ಶನಿವಾರ ಸಂಜೆ ಮಂಜುನಾಥ್ ಗೌಡರ ಮನೆಗೆ ದಿಢೀರ್ ಭೇಟಿ ನೀಡಿ ಆರ್ ಎಂ ಎಂ ಜೊತೆ ಮಾತನಾಡಿ ಎಲ್ಲಾ ವೈಮನಸ್ಸು ಉಪಶಮನ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಏ.12 ರಿಂದ ಸಭೆಗಳಿಗೆ ಇಬ್ಬರು ಒಟ್ಟಾಗಿ ಹೊಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಕೊನೆಗೂ ಜೋಡೆತ್ತುಗಳು ಒಟ್ಟಿಗೆ ಅಖಾಡಕ್ಕಿಳಿಯುವುದಕ್ಕೆ ಸಮಯ ನಿಗದಿಯಾಗಿದೆ. ಈ ಕಾರಣದಿಂದ ಎದುರಾಳಿಗಳಿಗೆ ಢವಢವ ಶುರುವಾಗುತ್ತಾ ಅಥವಾ ಎದುರಾಳಿಗಳು ಎದ್ದು ನಿಲ್ತಾರಾ ಕಾದು ನೋಡಬೇಕಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…