Categories: Thirthahalli

ಒಂದು ವಾರದ ಹಿಂದೆ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ರಸ್ತೆ ಹಪ್ಪಳದಂತೆ ಕಿತ್ತು ಬಂತು !

ತೀರ್ಥಹಳ್ಳಿ: ತಾಲೂಕಿನ ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡೆಮನೆ ಸಂಪರ್ಕ ರಸ್ತೆ ಕಳೆದ ಒಂದು ವಾರದ ಹಿಂದೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಇದೀಗ ಒಂದು ವಾರಕ್ಕೆ ರಸ್ತೆ ಹಪ್ಪಳದಂತೆ ಕಿತ್ತು ಬಂದಿದೆ.

ಗುರುವಾರ ರಸ್ತೆಯಲ್ಲಿ ಸೇರಿದ ಗ್ರಾಮಸ್ಥರು ಕೈಯಲ್ಲೇ ಟಾರ್ ರಸ್ತೆ ಕಿತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರಟೂರು ಗ್ರಾಮ ಪಂಚಾಯತ್ ಹೊರಣಿ ಗ್ರಾಮದ ಜಿಗಳಗೋಡಿನಿಂದ ಕಡೆಮನೆಗೆ ಒಂದೂವರೆ ಕಿ‌.ಮೀ ಸಂಪರ್ಕ ರಸ್ತೆ ಇದಾಗಿದೆ.

ಸುಮಾರು 28 ಮನೆಗಳಿವೆ. ಶಾಸಕ ಆರಗ ಜ್ಞಾನೇಂದ್ರ ರವರು ಅನುದಾನ ತಂದಿದ್ದಾರೆ. ಆದರೆ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿ ಅವರ ಹೆಸರಿಗೆ ಕಳಂಕ ತರುತ್ತಿದ್ದಾರೆ. ಇನ್ನು ರಸ್ತೆಗೆ ಟಾರು ಹಾಕುವಾಗ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಕಳಪೆ ಹಾಕಲಾಗಿದೆ. ಕಾಲು ಇಂಚು ಕೂಡ ಟಾರು ಹಾಕಿಲ್ಲ. ಇದರಿಂದಾಗಿ ಎಲ್ಲಾ ಕಡೆ ರಸ್ತೆ ಹೊಂಡ ಬಿದ್ದಿದೆ. ತಕ್ಷಣ ಜಿಲ್ಲಾ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ತನಿಖೆ ನಡೆಸಿ ಕಾಮಗಾರಿ ಸರಿಪಡಿಸಬೇಕು. ಇಲ್ಲವಾದಲ್ಲಿ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಜತೆಗೆ ರಸ್ತೆ ಅಕ್ಕಪಕ್ಕ ಹಾಕಿದ ಮಣ್ಣು ಕೂಡ ಸರಿಯಾಗಿ ಹಾಕಿಲ್ಲ. ಮಣ್ಣು ಅಲ್ಲಲ್ಲಿ ಹೊಯ್ಯಲಾಗಿದೆ. ಇದು ಮಳೆಗಾಲದಲ್ಲಿ ಕೊಚ್ಚಿ ಹೋಗಿ ಚರಂಡಿಗೆ ಸೇರಲಿದೆ. ಇದರಿಂದ ರಸ್ತೆ ಸಂಪೂರ್ಣ ಹಾಳಾಗಲಿದೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

2 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

10 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

21 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

21 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

21 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

22 hours ago