ಕಾರಿನಲ್ಲಿ ಗಾಂಜಾ ಸಾಗಾಟ ; ಮೂವರ ಬಂಧನ

0 142

ತೀರ್ಥಹಳ್ಳಿ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಾಳೂರಿನಲ್ಲಿ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಆರೋಪಿಗಳಾದ ಯೂನಸ್‌, ಲತೀಫ್‌, ಮನೋಜ್‌ ಎಂಬುವವರನ್ನು ಬಂಧಿಸಲಾಗಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಗಾಂಜಾ ಸಾಗಿಸಲಾಗುತ್ತಿದ್ದು, ಕಾರಿನಲ್ಲಿ ಗಾಂಜಾ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ಮೊನ್ನೆಯಷ್ಟೆ ಕೋಣಂದೂರು ಸಮೀಪ ಅಡಿಕೆ ತೋಟದಲ್ಲಿ ಗಾಂಜಾ ಬೆಳೆದ ಪ್ರಕರಣ ದಾಖಲಾಗಿತ್ತು.

ಡಿವೈಎಸ್‌ಪಿ ಗಜಾನನ ವಾಮನ ಸುತರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾಳೂರು ಎಸ್‌ಐ ನವೀನ್‌ ಮಠಪತಿ, ಎಎಸ್‌ಐ ಶಿವಾನಂದ, ಧರಣಯ್ಯ ಸಿಬ್ಬಂದಿಗಳಾದ ಸುರಕ್ಷಿತ್‌, ಸಂತೋಷ್‌, ವಿವೇಕ್‌, ರಾಮಣ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!