Categories: Thirthahalli

CM Basavaraja Bommai | Araga Jnanendra | ಗೃಹ ಸಚಿವರನ್ನು ಹಾಡಿ ಹೊಗಳಿದ ಸಿಎಂ

ತೀರ್ಥಹಳ್ಳಿ : ಆರಗ ಜ್ಞಾನೇಂದ್ರರಂತಹ ಜನಪರ ನಾಯಕ ದೊರಕುವುದು ಅಪರೂಪ. ಅಡಿಕೆ, ಶರಾವತಿ ಸಂತ್ರಸ್ತರು, ಡೀಮ್ಡ್‌ ಫಾರೆಸ್ಟ್‌, ಪಶ್ಚಿಮಘಟ್ಟ ವಿಚಾರಗಳಿಗೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ಅವರು ಪದೇ ಪದೇ ಅತೀವ ಕಾಳಜಿಯಿಂದ ನನ್ನ ಬಳಿ ಬಂದು ಪರಿಹರಿಸಲು ಪೀಡಿಸಿದ್ದಾರೆ. ಅವರ ಇಲಾಖೆಗೆ ಸಂಬಂಧಪಡದ ವಿಚಾರಗಳಾಗಿದ್ದರೂ ಇವುಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ನನಗೆ ಗೃಹಮಂತ್ರಿ ಹುದ್ದೆ ಬೇಡ. ಬದಲಿಗೆ ತೋಟಗಾರಿಕಾ ಮಂತ್ರಿ ಮಾಡಿ ಎಂದಿದ್ದರು. ಗೃಹಮಂತ್ರಿಯಾಗಿ ಅವರಷ್ಟು ಸವಾಲುಗಳನ್ನು ಯಾರು ಎದುರಿಸಲಿಲ್ಲ. ಹಿಜಾಬ್‌, ಹಲಾಲ್‌, ಪಿಎಸ್‌ಐ ಹಗರಣ, ಎಲ್ಲವನ್ನು ಕೂಡ ಅವರು ಬೆನ್ನುಹಾಕಿ ಓಡಿ ಹೋಗದೆ ಸಮರ್ಥವಾಗಿ ಎದುರಿಸಿದ್ದಾರೆ. ಪಿಎಸ್‌ಐ ಹಗರಣದಲ್ಲಂತೂ ಅತ್ಯಂತ ಪಾರದರ್ಶಕ ತನಿಖೆಗೆ ಅದೇಶ ನೀಡಿ ಉನ್ನತ ಅಧಿಕಾರಿಯನ್ನೇ ಜೈಲಿಗೆ ಹಾಕಿದ್ದಾರೆ. ಮಾತ್ರವಲ್ಲದೇ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟ ತನಿಖೆಯನ್ನು ಶೀಘ್ರವಾಗಿ ಮುಗಿಸಿ ತಪಿತಸ್ಥರಿಗೆ ಶಿಕ್ಷೆ ಕೊಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಶ್ಲಾಘಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ತೂದೂರಿನಲ್ಲಿ ಗುರುವಾರ ಆಯೋಜಿಸಿದ್ದ ಮಂಡಗದ್ದೆ ಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವದಿಂದಾಗಿ 2047ರ ಹೊತ್ತಿಗೆ  ಭಾರತ ಪ್ರಪಂಚದಲ್ಲಿಯೇ ಮುಂಚೂಣಿ ಸ್ಥಾನದಲ್ಲಿ ನಿಲ್ಲಲಿದೆ. ಅಂತಹ ದೂರದೃಷ್ಟಿ ಅವರಿಗಿದೆ ಎಂದರು.

ಗೃಹಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರ ಸ್ಥಾನಮಾನದ ಯೋಗ್ಯತೆ ತಕ್ಕದಾಗಿ ಮಾತನಾಡಬೇಕು. ಪಿಎಸ್‌ಐ ಹಗರಣದ ಸಾಕ್ಷಿ ಇದೆ ಎಂದು ನನ್ನನ್ನು ತೋಜೋವಧೆ ಮಾಡಲು ಮುಂದಾಗಿದ್ದಾರೆ. ತಾಕತ್ತು ಇದ್ದರೆ ದಾಖಲೆಗಳನ್ನು ಸಿಓಡಿಗೆ ನೀಡಿ ನನ್ನನು ಜೈಲಿಗೆ ಕಳುಹಿಸಲಿ. ಮತದಾರರ ಮುಂದೆ ಸೋಗಲಾಡಿತನ ಪ್ರದರ್ಶಿಸುವುದು ಬೇಡ. ಈ ರೀತಿಯ ಗಿಮಿಕ್‌ ರಾಜಕಾರಣ ಮಾಡಿದ್ದಕ್ಕೆ ಅವರನ್ನು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಧದಲ್ಲಿಯೇ ಮಂತ್ರಿ ಸ್ಥಾನದಿಂದ ಕಿತ್ತುಕೊಂಡು ಮನೆಗೆ ಕಳುಹಿಸಿದ್ದರು. ಈ ಬಾರಿ ನಾನು ಹೆಮ್ಮೆಯಿಂದ ಅಭಿವೃದ್ಧಿ ಮುಂದಿಟ್ಟು ಮತಯಾಚಿಸುತ್ತೇನೆ. ಕಾರ್ಯಕರ್ತರ ಸಹಕಾರದಿಂದ ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿಗೆ ಮತ ನೀಡುವುದಾದರೆ ನನ್ನ ಎದುರಾಳಿಯ ಡಿಪಾಸಿಟ್‌ ಉಳಿಯುವುದಿಲ್ಲ ಎಂದು ಕಿಮ್ಮನೆ ರತ್ನಾಕರ ವಿರುದ್ಧ ಆರಗ ಜ್ಞಾನೇಂದ್ರ ಹರಿಹಾಯ್ದರು.

ಆದರೆ ಅನಿರೀಕ್ಷಿತವಾಗಿ ಸಿಎಂ ಬೊಮ್ಮಾಯಿ ಅವರು ಆಗಮಿಸಿದ್ದಾಗಲೂ ಕಾರ್ಯಕರ್ತರಲ್ಲಿ ಅಂತಹ ಹುಮ್ಮಸ್ಸೇನು ಕಂಡು ಬರಲಿಲ್ಲ. ಅದೇ ಭಾಗದ ಹಿರಿಯ ನಾಯಕ ಅಶೋಕ್‌ ಮೂರ್ತಿ, ಇನ್ನೋರ್ವ ಪ್ರಭಾವಿ ಯುವ ನಾಯಕ ಆರ್.‌ ಮದನ್‌ ಗೈರು ಹಾಜರಿ ಎದ್ದು ಕಂಡಿತಲ್ಲದೇ ಭಿನ್ನಮತದ ಅನುಮಾನವನ್ನು ಮೂಡಿಸಿತ್ತು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಬೇಗುವಳ್ಳಿ ಸತೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಬೇಗುವಳ್ಳಿ ಕವಿರಾಜ್, ಮ್ಯಾಮ್ಕೋಸ್ ಉಪಾಧ್ಯಕ್ಷ ಹುಲ್ಕುಳಿ ಮಹೇಶ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ ಶೆಟ್ಟಿ, ತೂದೂರು ಗ್ರಾ.ಪಂ ಅಧ್ಯಕ್ಷ ಮಧುರಾಜ್ ಹೆಗ್ಡೆ ಇದ್ದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

5 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

11 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

19 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago