ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲ್ಛಾವಣಿ ಮೇಲೆ ಪಲ್ಟಿ ಹೊಡೆದ ಕಾರು !
ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಮನೆಗೆ ಮೇಲೆ ಪಲ್ಟಿಯಾದ ಘಟನೆ ತೀರ್ಥಹಳ್ಳಿ (Thirthahalli) ಪಟ್ಟಣದ ಹೊರವಲಯದ ಭಾರತೀಪುರ ತಿರುವಿನಲ್ಲಿ ಇಂದು ಬೆಳಗಿನಜಾವ ನಡೆದಿದೆ.
ಇಬ್ಬರು ಇಂಜಿನಿಯರ್ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್ ಎಂಬುವರ ಮನೆಯ ಮೇಲ್ಛಾವಣಿ ಮೇಲೆ ಬಿದ್ದು ಅಂಗಳಕ್ಕೆ ಮಹೀಂದ್ರ ನೆಕ್ಸ 300 ಕಾರು ಪಲ್ಟಿ ಹೊಡೆದಿದೆ.
ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು ಚಾಲಕನಿಗೆ ನಿದ್ದೆ ಮಂಪರು ಇದ್ದುದರಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.