ತೀರ್ಥಹಳ್ಳಿ : ಚುನಾವಣೆಯಲ್ಲಿ ಸೋತರು ಕಿಮ್ಮನೆ ರತ್ನಾಕರ್ ರವರಿಗೆ ಡಿಮ್ಯಾಂಡ್ ಶುರುವಾಗಿದೆ. ಉಪ ಮುಖ್ಯಮಂತ್ರಿ ಪತ್ರ ಬರೆದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ತಿಳಿದುಬಂದಿದೆ.
ಕಿಮ್ಮನೆ ರತ್ನಾಕರ್ ಸಿಎಂ ರಾಜಕೀಯ ಕಾರ್ಯದರ್ಶಿ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಕರೆಗೆ ಒಪ್ಪಿಕೊಂಡಿದ್ದಾರೆಯೇ ಎಂಬುದನ್ನು ಸ್ವತಃ ಅವರಿಂದಾನೇ ತಿಳಿಸಬೇಕಿದೆ.
ಇನ್ನೂ ಪತ್ರ ಬರೆದಿರುವ ಉಪ ಮುಖ್ಯಮಂತ್ರಿ ಡಿಕೆಶಿ, ಕಿಮ್ಮನೆ ರತ್ನಾಕರ್ ರವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಗುವ ಮುನ್ಸೂಚನೆಯನ್ನು ನೀಡಿದ್ದಾರೆಯೇ ? ಎಂಬ ಇದೀಗ ಪ್ರಶ್ನೆ ಹುಟ್ಟು ಹಾಕಿದ್ದು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಸೋತರು ಕಿಮ್ಮನೆಗೆ ಡಿಮ್ಯಾಂಡ್ ಅಂತೂ ಬಂದಿದ್ದು ದಟ್ಟವಾಗಿದೆ.
ಪತ್ರದ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿರುವ ಡಿಕೆಶಿ, ಪರಾಜಿತರಾದರು ಪಕ್ಷಕ್ಕೆ ಕೆಲಸ ನಿರ್ವಹಿಸಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ ಸೂಚನೆ ನೀಡಿರುವ ಸಾಧ್ಯತೆಯೂ ಇದೆ ತಿಳಿದುಬಂದಿದೆ.
ಪಕ್ಷ ಸಂಘಟನೆಗೆ ಶ್ರಮ ವಹಿಸುವಂತೆ ಮನವಿ ಮಾಡಿಕೊಂಡಿರುವ ಉಪಮುಖ್ಯಮಂತ್ರಿ, ಸಂಘಟನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿ ಕಾರ್ಯನಿರ್ವಹಿಸುವಂತೆ ಕಿಮ್ಮನೆ ಯವರಲ್ಲಿ ವಿನಂತಿಸಿಕೊಂಡಿದ್ದಾರೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…