ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ !

ತೀರ್ಥಹಳ್ಳಿ : ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.

ಉಗ್ರಗಾಮಿಗಳು ಭಟ್ಕಳ ಮಾದರಿಯಲ್ಲೇ ತೀರ್ಥಹಳ್ಳಿಯನ್ನು ಉಗ್ರರ ನಕ್ಷೆಗೆ ಸೇರಿಸಲು ಪಣ ತೊಟ್ಟಿದ್ದಾರೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ.

ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇ ರೀತಿ ತೀರ್ಥಹಳ್ಳಿ ಮೂಲದವರಾದ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರು ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದಾರೆ.

ಆರೋಪಿ ಅರಾಫತ್ ಈ ವಿಚಾರವನ್ನು ಪದೇ ಪದೇ ಮಾಜ್ ಹಾಗೂ ಶಾರೀಕ್ಗೆ ಹೇಳುತ್ತಿದ್ದನು. ಈ ಬಗ್ಗೆ ಎನ್ಐಎಗೆ ಬೇಕಾದ ಮೋಸ್ಟ್ ವಾಟೆಂಡ್ ಟೆರರಿಸ್ಟ್ ಅಬ್ದುಲ್ ಮತೀನ್, ಅರಾಫತ್ ಅಲಿಯ ತಲೆಯಲ್ಲಿ ತುಂಬುತ್ತಿದ್ದನು. ಸದ್ಯ ಮೂವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಅಬ್ದುಲ್ ಮತೀನ್ ಬಂಧನ ಆಗಬೇಕಿದೆ‌. ಈ ನಾಲ್ವರು ತೀರ್ಥಹಳ್ಳಿ ಬ್ರದರ್ಸ್ ಅಂತ ಹೆಸರರಾಗಬೇಕು ಅಂದುಕೊಂಡಿದ್ದರು.

ಯಾರು ಈ ಭಟ್ಕಳ್ ಸಹೋದರರು

ಯಾಸಿನ್ ಭಟ್ಕಳ​​, ರಿಯಾಜ್ ಭಟ್ಕಳ​​​, ಇಕ್ಬಾಲ್​ ಭಟ್ಕಳ​. ಭಟ್ಕಳ​ ಸಹೋದರರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿದೆ. ಯಾಸಿನ್​ ಭಟ್ಕಳನನ್ನು 2013ರ ಆಗಸ್ಟ್​ 28 ರಂದು ಭಾರತೀಯ ಗುಪ್ತಚರ ಅಧಿಕಾರಿಗಳು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

5 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

9 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

9 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

11 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

12 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

19 hours ago