ತೀರ್ಥಹಳ್ಳಿ ; ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ತಲ್ವಾರ್ ಬೀಸಿ ದಾಂದಲೆ !
ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದು ಇಬ್ಬರಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ.
ಕಮ್ಮರಡಿಯ ಯುವಕ ರಸ್ತೆ ದಾಟುತ್ತಿದ್ದಾಗ ಕುಡಿದ ಮತ್ತಿನಲ್ಲಿದ್ದ ನಾಲ್ವರು ಸೀನಿಮಿಯ ರೀತಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ಗಲಾಟೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ ಎನ್ನಲಾಗಿದ್ದು, ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.