ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 1 ಲಕ್ಷ ರೂ.ಗಳ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು ಮೌಲ್ಯ 25 ಸಾವಿರ ರೂ.ಗಳ 310 ಜೀವಂತ ಗುಂಡುಗಳು, ಒಂದು ಕತ್ತಿ ಮತ್ತು ಒಂದು ಚಾಕು, ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, ಆರು ಜಿಂಕೆ ಕೊಂಬಿನ ಟ್ರೊಫಿ, ಒಂದು ಸಿಸಿ ಟಿವಿ ಡಿವಿ ಆರ್, ಅಂದಾಜು ಮೌಲ್ಯ 7,650 ರೂ.ಗಳ ಒಟ್ಟು 51 ಬಿಯರ್ ಟಿನ್ ಗಳು, ಅಂದಾಜು ಮೌಲ್ಯ 1 ಲಕ್ಷ ರೂ. ಗಳ ಮದ್ಯ ತುಂಬಿದ ಬಾಟಲ್ ಗಳು, ಅಂದಾಜು ಮೌಲ್ಯ 750 ರೂ.ಗಳ ಒಟ್ಟು 6 Breezer ಬಾಟಲ್ ಮತ್ತು 3 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ದಾಳಿಯಲ್ಲಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್ ಪೋಲಿಸ್ ಅಧೀಕ್ಷಕರು ಮತ್ತು ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ಮತ್ತು ಅಶ್ವತ್ ಗೌಡ ಪೊಲೀಸ್ ನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ ರವರ ನೇತೃತ್ವದ ಸಾಗರ್ ಅತ್ತರವಾಲ ಪೊಲೀಸ್ ಉಪನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ, ನವೀನ್ ಕುಮಾರ್ ಮಠಪತಿ ಪೊಲೀಸ್ ಉಪನಿರೀಕ್ಷಕರು ಮಾಳೂರು ಪೊಲೀಸ್ ಠಾಣೆ, ರಂಗನಾಥ ಅಂತರಗಟ್ಟಿ ಪೊಲೀಸ್ ಉಪನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ, ಪ್ರವೀಣ್, ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್ಪೇಟೆ ಪೊಲೀಸ್ ಠಾಣೆ ಇವರು ಪಾಲ್ಗೊಂಡಿದ್ದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…