ನೀರಿನ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ; ಅನಾಥವಾದ 4 ಅವಳಿ ಮಕ್ಕಳು
ತೀರ್ಥಹಳ್ಳಿ : ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರದಡಿಗೆ ಬಂಡೆ ಕೆರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಆಕೆಯ ನಾಲ್ಕು ಅವಳಿ ಜವಳಿ ಮಕ್ಕಳು ಅನಾಥವಾಗಿವೆ.
ಮೃತ ಮಹಿಳೆ ಶೃತಿ (30) ಎಂದು ತಿಳಿದು ಬಂದಿದೆ. ಆಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ಪತಿಯನ್ನು ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ ವಿಶ್ವಾಸಾರ್ಹ ನಡೆಯ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಆದರೆ ಈಗ ದುರಂತ ಅಂತ್ಯ ಕಂಡಿದ್ದಾರೆ.