ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ತುಂಗಾ ನದಿ ಪಾಲು..!!

0 110

ತೀರ್ಥಹಳ್ಳಿ: ತಾಲೂಕಿನ ತೀರ್ಥಮುತ್ತೂರು ಮಠದ ಮುಂಭಾಗ ಇರುವ ಹೋಂ ಸ್ಟೇಯಲ್ಲಿ ಉಳಿದಿದ್ದ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ಭಾನುವಾರ ನಡೆದಿದೆ.


ಶನಿವಾರ ಪ್ರವಾಸಕ್ಕೆ ಬಂದಿದ್ದ 8-10 ಮಂದಿ ತಂಡ ತುಂಗಾ ನದಿಯಲ್ಲಿ ಈಜಲು ತೆರಳಿದಾಗ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದರು. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ.

ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

Leave A Reply

Your email address will not be published.

error: Content is protected !!